Featured

ಮಂಗಳೂರು: ರೆಸ್ಟೊರೆಂಟ್‌ನಲ್ಲಿ ಯುವತಿಯ ಮೇಲೆ ದಾಳಿ ಪ್ರಕರಣ : ಮೂವರ ಬಂಧನ -Vshwanews24

ಮಂಗಳೂರು: ರೆಸ್ಟೊರೆಂಟ್‌ನಲ್ಲಿ ಯುವತಿಯ ಮೇಲೆ ದಾಳಿ ಪ್ರಕರಣ : ಮೂವರ ಬಂಧನ -Vshwanews24

ಮಂಗಳೂರು: ನಗರದ ಹೋಟೆಲೊಂದರಲ್ಲಿ ಯುವತಿಯ ಮೇಲೆ ಆಕೆಯ ಹಳೆಯ ಸ್ನೇಹಿತ ಮತ್ತು ಮತ್ತವನ ಗೆಳೆಯರು ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಗಳನ್ನು ಬೊಕ್ಕಪಟ್ಣದ ತ್ರಿಶೂಲ್ ಸಾಲಿಯಾನ್, ಕೋಡಿಕಲ್ ನ ಸಂತೋಷ್ ಪೂಜಾರಿ ಮತ್ತು ಅಶೋಕ್ ನಗರದ ದ್ಯಾನೇಶ್ ಅರನ್ ಎಂದು ಗುರುತಿಸಲಾಗಿದೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿ, “ಶನಿವಾರ ಬೆಂದೂರ್ ವೆಲ್‌ನ ರೆಸ್ಟೋರೆಂಟ್‌ನಲ್ಲಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾಗ ಆರೋಪಿಯು ಯುವತಿಯ ಮಾನಭಂಗಕ್ಕೆ ಯತ್ನಿಸಿದ್ದು, ಈ ಕೃತ್ಯವನ್ನು ತಡೆಯಲು ಬಂದ ಯುವತಿಯ ಸ್ನೇಹಿತರಿಗೆ ಗಂಬೀರವಾಗಿ ಹಲ್ಲೆ ನಡೆಸಿ ಕೊಲೆ ಯತ್ನ ಮಾಡಿದ್ದು, ಭಾರತೀಯ ದಂಡ ಸಂಹಿತೆ ಮತ್ತು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯ ಪ್ರಕಾರ ವಿವಿಧ ನಿಬಂಧನೆಗಳ ಅಡಿಯಲ್ಲಿ ನಗರ (ಪೂರ್ವ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದರು.

ಕಾಪು ಪೊಲೀಸ್ ವೃತ್ತ ನೀರಿಕ್ಷಕರಿಂದ ERSS 112 ಬಗ್ಗೆ ಕಟಪಾಡಿಯಲ್ಲಿ ಸಾರ್ವಜನಿಕರಿಗೆ ಮಾಹಿತಿ ಸಭೆ.-vishwanews24 –

ಇನ್ನು “18 ವರ್ಷದ ಯುವತಿ ಪಿಯುಸಿ ಓದುತ್ತಿದ್ದು, ಆಕೆಯ ಪೋಷಕರು ಕೆನಡಾದಲ್ಲಿರುವುದರಿಂದ ಅಜ್ಜಿಯರೊಂದಿಗೆ ವಾಸಿಸುತ್ತಿರುತ್ತಾಳೆ. ತ್ರಿಶೂಲ್ ಸಾಲ್ಯಾನ್ ಮತ್ತು ಯುವತಿ ಸಾಮಾಜಿಕ ಜಾಲತಾಣಗಳ ಮೂಲಕ ಪರಸ್ಪರ ಪರಿಚಯವಾಗಿದ್ದರು. ನಂತರ ವೈಮಸ್ಸು ಉಂಟಾಗಿ ಯುವತಿ ಆತನಿಂದ ದೂರವಾಗಲು ನಿರ್ಧರಿಸಿದ್ದಳು. ಹೀಗಾಗಿ ಆತ ನೀಡಿದ್ದ ಗಿಫ್ಟ್ ಗಳನ್ನು ಮರಳಿಸಲು ಕೆಲ ದಿನಗಳ ಹಿಂದೆ ನಗರದ ಬಂಟ್ಸ್ ಹಾಸ್ಟೆಲ್ ಬಳಿ ಬರುವಂತೆ ಹೇಳಿದ್ದಳು. ಈ ವೇಳೆಯೂ ತ್ರಿಶೂಲ್ ಆಕೆಯ ಮೇಲೆ ದಾಳಿಗೆ ಯತ್ನಿಸಿದ್ದ” ಎಂದು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಯುವತಿಯು ಕದ್ರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಳು. ನನ್ನ ಮತ್ತು ನನ್ನ ಸ್ನೇಹಿತರ ಮೇಲೆ ಕೊಲೆ ಯತ್ನ ನಡೆಸಲಾಗಿದೆ ಎಂದು ಯುವತಿ ದೂರು ನೀಡಿದ್ದಳು

ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

15 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

18 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

18 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

18 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

18 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

19 hours ago