ಮಂಗಳೂರು: ನಗರದ ಹೋಟೆಲೊಂದರಲ್ಲಿ ಯುವತಿಯ ಮೇಲೆ ಆಕೆಯ ಹಳೆಯ ಸ್ನೇಹಿತ ಮತ್ತು ಮತ್ತವನ ಗೆಳೆಯರು ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳನ್ನು ಬೊಕ್ಕಪಟ್ಣದ ತ್ರಿಶೂಲ್ ಸಾಲಿಯಾನ್, ಕೋಡಿಕಲ್ ನ ಸಂತೋಷ್ ಪೂಜಾರಿ ಮತ್ತು ಅಶೋಕ್ ನಗರದ ದ್ಯಾನೇಶ್ ಅರನ್ ಎಂದು ಗುರುತಿಸಲಾಗಿದೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿ, “ಶನಿವಾರ ಬೆಂದೂರ್ ವೆಲ್ನ ರೆಸ್ಟೋರೆಂಟ್ನಲ್ಲಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾಗ ಆರೋಪಿಯು ಯುವತಿಯ ಮಾನಭಂಗಕ್ಕೆ ಯತ್ನಿಸಿದ್ದು, ಈ ಕೃತ್ಯವನ್ನು ತಡೆಯಲು ಬಂದ ಯುವತಿಯ ಸ್ನೇಹಿತರಿಗೆ ಗಂಬೀರವಾಗಿ ಹಲ್ಲೆ ನಡೆಸಿ ಕೊಲೆ ಯತ್ನ ಮಾಡಿದ್ದು, ಭಾರತೀಯ ದಂಡ ಸಂಹಿತೆ ಮತ್ತು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯ ಪ್ರಕಾರ ವಿವಿಧ ನಿಬಂಧನೆಗಳ ಅಡಿಯಲ್ಲಿ ನಗರ (ಪೂರ್ವ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದರು.
ಕಾಪು ಪೊಲೀಸ್ ವೃತ್ತ ನೀರಿಕ್ಷಕರಿಂದ ERSS 112 ಬಗ್ಗೆ ಕಟಪಾಡಿಯಲ್ಲಿ ಸಾರ್ವಜನಿಕರಿಗೆ ಮಾಹಿತಿ ಸಭೆ.-vishwanews24 –
ಇನ್ನು “18 ವರ್ಷದ ಯುವತಿ ಪಿಯುಸಿ ಓದುತ್ತಿದ್ದು, ಆಕೆಯ ಪೋಷಕರು ಕೆನಡಾದಲ್ಲಿರುವುದರಿಂದ ಅಜ್ಜಿಯರೊಂದಿಗೆ ವಾಸಿಸುತ್ತಿರುತ್ತಾಳೆ. ತ್ರಿಶೂಲ್ ಸಾಲ್ಯಾನ್ ಮತ್ತು ಯುವತಿ ಸಾಮಾಜಿಕ ಜಾಲತಾಣಗಳ ಮೂಲಕ ಪರಸ್ಪರ ಪರಿಚಯವಾಗಿದ್ದರು. ನಂತರ ವೈಮಸ್ಸು ಉಂಟಾಗಿ ಯುವತಿ ಆತನಿಂದ ದೂರವಾಗಲು ನಿರ್ಧರಿಸಿದ್ದಳು. ಹೀಗಾಗಿ ಆತ ನೀಡಿದ್ದ ಗಿಫ್ಟ್ ಗಳನ್ನು ಮರಳಿಸಲು ಕೆಲ ದಿನಗಳ ಹಿಂದೆ ನಗರದ ಬಂಟ್ಸ್ ಹಾಸ್ಟೆಲ್ ಬಳಿ ಬರುವಂತೆ ಹೇಳಿದ್ದಳು. ಈ ವೇಳೆಯೂ ತ್ರಿಶೂಲ್ ಆಕೆಯ ಮೇಲೆ ದಾಳಿಗೆ ಯತ್ನಿಸಿದ್ದ” ಎಂದು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಯುವತಿಯು ಕದ್ರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಳು. ನನ್ನ ಮತ್ತು ನನ್ನ ಸ್ನೇಹಿತರ ಮೇಲೆ ಕೊಲೆ ಯತ್ನ ನಡೆಸಲಾಗಿದೆ ಎಂದು ಯುವತಿ ದೂರು ನೀಡಿದ್ದಳು
ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…