ಬೆಂಗಳೂರು: ಮಂಗಳೂರು ರೈಲ್ವೇ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಅವರ ಹೆಸರಿಡಬೇಕು ಎಂದು ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಯುಟಿ ಖಾದರ್ ಒತ್ತಾಯಿಸಿದ್ದಾರೆ.
ವಿಧಾನಸಭಾ ಅಧಿವೇಶನದಲ್ಲಿ ಶೂನ್ಯವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಮಾಜಿ ಸಚಿವ ಯುಟಿ ಖಾದರ್, ಮಂಗಳೂರು ವಿಮಾನ ನಿಲ್ದಾಣಕ್ಕೆ ಅಂದಿನ ಕಾಲದಲ್ಲಿ ಅಸಮಾನತೆಯ ವಿರುದ್ಧ ಹೋರಾಡಿದ ತುಳುನಾಡಿನ ಕಾರಣಿಕ ಶಕ್ತಿಗಳಾದ ಕೋಟಿ ಚೆನ್ನಯ್ಯ ಅವರ ಹೆಸರಿಡಬೇಕು. ಮಂಗಳೂರು ರೈಲ್ವೇ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಅವರ ಹೆಸರನ್ನಿಡಬೇಕು ಎಂದು ಆಗ್ರಹಿಸಿದರು. ಅಲ್ಲದೇ ಇದೇ ವೇಳೆ ಮಂಗಳೂರು ವಿಶ್ವವಿದ್ಯಾಲಯಕ್ಕೆ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಹೆಸರನ್ನಿಡಬೇಕು ಎಂದು ಯುಟಿ ಖಾದರ್ ಸದನದಲ್ಲಿ ಸರ್ಕಾರವನ್ನು ಒತ್ತಾಯಿಸಿದರು.
ಬೆಳ್ತಂಗಡಿ : ವಯೋ ವೃದ್ಧ ತಾಯಿಯನ್ನು ರಸ್ತೆಯಲ್ಲೇ ಬಿಟ್ಟು ಹೋಗಿರುವ ಮನೆ ಮಂದಿ -Vishwanews24
ಇತ್ತೀಚೆಗೆ ಜಿಲ್ಲೆಯ ಬಿಲ್ಲವ ಸಂಘಟನೆಗಳು ಮಂಗಳೂರಿನ ಕುದ್ರೋಳಿ ಸಮೀಪದ ಲೇಡಿಹಿಲ್ ಸರ್ಕಲ್ಗೆ ನಾರಾಯಣ ಗುರು ಅವರ ಹೆಸರನ್ನಿಡುವಂತೆ ಆಗ್ರಹಿಸಿದ್ದವು. ಅಲ್ಲದೇ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಅವರ ಹೆಸರನ್ನಿಡುವಂತೆ ಆಗ್ರಹಿಸಿದ್ದವು. ಇದಕ್ಕಾಗಿ ಕೆಲವಾರದ ಹಿಂದೆ ಬೈಕ್ ಜಾಥಾವನ್ನೂ ನಡೆಸಲಾಗಿತ್ತು. ವಾರದ ಹಿಂದಷ್ಟೇ ವಿಮಾನ ನಿಲ್ದಣಕ್ಕೆ ಹೆಸರನ್ನಿಡುವ ಬಗ್ಗೆ ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಈ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ್ದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]