ಮಂಗಳೂರು: ಲಂಚಕ್ಕಾಗಿ ಪೀಡಿಸುತ್ತಿದ್ದ ಆರೋಪ ಎದುರಿಸುತ್ತಿದ್ದ ಮಂಗಳೂರು ನಗರ ಸರ್ವೇಯರ್ (ಮಂಗಳೂರು ತಾಲೂಕಿನ ಪ್ರಭಾರ) ಗಂಗಾಧರ ಎಂ. ಲಂಚ ಸ್ವೀಕರಿಸುತ್ತಿರುವಾಗಲೇ ಮಂಗಳೂರಿನ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಮಂಗಳೂರಿನ ನಗರದಲ್ಲಿ ಉದ್ಯಮಿಯೋರ್ವರು ತಮ್ಮ ಕಚೇರಿಯ ಪೀಠೋಪಕರಣ ಮಾಡಿಸಲು ತಮ್ಮ ಮನೆಯ ಆವರಣದಲ್ಲಿ ಇದ್ದ ಸಾಗುವಾನಿ ಮರವನ್ನು ಕಡಿಯಲು ಅರಣ್ಯ ಇಲಾಖೆಗೆ ಅನುಮತಿ ಕೋರಿ ಪತ್ರ ಬರೆದಿದ್ದರು. ಮಂಗಳೂರು ನಗರದ ಅರಣ್ಯ ಇಲಾಖೆ ಈ ಪತ್ರವನ್ನು ಕಂದಾಯ ಇಲಾಖೆಗೆ ಕಳಿಸಿತ್ತು. ತಿಂಗಳು ಕಳೆದರೂ ಸ್ಥಳ ಪರಿಶೀಲನೆಗೆ ಸರ್ವೇಯರ್ ಗಂಗಾಧರ್ ಬಂದಿರಲಿಲ್ಲ. ಈ ಬಗ್ಗೆ ಕೇಳಿದಾಗ 3 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕಂದಾಯ ಇಲಾಖೆಗೆ ಕಟ್ಟಬೇಕಾದ 600 ರೂ. ಜೊತೆಗೆ ಲಂಚದ ಹಣ 3 ಸಾವಿರ ರೂ. ನೀಡಿ ಮತ್ತೊಂದು ತಿಂಗಳು ಕಳೆಯಿತು. ಮತ್ತೆ ಮರ ಇರುವ ಸ್ಥಳದ ನಕಾಶೆ ನೀಡಲು 30 ಸಾವಿರ ರೂ. ಡಿಮ್ಯಾಂಡ್ ಇಟ್ಟಿದ್ದರು.
ಇದರಿಂದ ಮನ ನೊಂದ ಉದ್ಯಮಿ, ಮಂಗಳೂರಿನ ಪರಿಸರ ಸಂರಕ್ಷಣಾ ಸದಸ್ಯರ ಗಮನಕ್ಕೆ ಈ ವಿಚಾರವನ್ನು ತಂದಿದ್ದರು. ತಕ್ಷಣ ಇದನ್ನು ಮಂಗಳೂರಿನ ಎಸಿಬಿ ಇನ್ಸ್ ಪೆಕ್ಟರ್ ಶ್ಯಾಮಸುಂದರ್ ಅವರ ಗಮನಕ್ಕೆ ತರಲಾಯಿತು. 3 ದಿನಗಳ ಮುಂಜಾಗ್ರತಾ ಕಾರ್ಯಾಚರಣೆ ಮಾಡಿದ ಎಸಿಬಿ ಅಧಿಕಾರಿಗಳು ಮಂಗಳವಾರ 5.30ರ ಸುಮಾರಿಗೆ ಮಂಗಳೂರಿನ ಮಿನಿ ವಿಧಾನ ಸೌಧದ ಬಳಿ 20 ಸಾವಿರ ರೂ. ಲಂಚದ ಹಣ ಪಡೆದುಕೊಳ್ಳುವ ಸಮಯ ಸಾಕ್ಷಿ ಸಮೇತ ಸರ್ವೇಯರ್ ಗಂಗಾಧರ್ ಎಂ. ಅವರನ್ನು ಬಂಧಿಸಿದ್ದಾರೆ.
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…