Featured

ಮಂಗಳೂರು: ಲಂಚ ಸ್ವೀಕರಿಸುತ್ತಿರುವಾಗಲೇ ಸಹಾಯಕ ಭೂ ನಿರ್ದೇಶಕ ಅಧಿಕಾರಿ ಎಸಿಬಿ ಬಲೆಗೆ -Vishwanews24

ಮಂಗಳೂರು: ಲಂಚ ಸ್ವೀಕರಿಸುತ್ತಿರುವಾಗಲೇ ಸಹಾಯಕ ಭೂ ನಿರ್ದೇಶಕ ಅಧಿಕಾರಿ ಎಸಿಬಿ ಬಲೆಗೆ -Vishwanews24

ಮಂಗಳೂರು: ಲಂಚಕ್ಕಾಗಿ ಪೀಡಿಸುತ್ತಿದ್ದ ಆರೋಪ ಎದುರಿಸುತ್ತಿದ್ದ ಮಂಗಳೂರು ನಗರ ಸರ್ವೇಯರ್ (ಮಂಗಳೂರು ತಾಲೂಕಿನ ಪ್ರಭಾರ) ಗಂಗಾಧರ ಎಂ. ಲಂಚ ಸ್ವೀಕರಿಸುತ್ತಿರುವಾಗಲೇ ಮಂಗಳೂರಿನ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ‌.

ಕರ್ನಾಟಕ ಮತ್ತು ಕೇರಳ ಅಂತರರಾಜ್ಯ ಪ್ರಯಾಣ ನಿಷೇಧವಿಲ್ಲ, ಕೊರೊನಾ ನೆಗಟಿವ್ ವರದಿ ಮಾತ್ರ ಕಡ್ಡಾಯ : ಸುಧಾಕರ್‌ ಸ್ಪಷ್ಟನೆ -Vishwanews24

ಮಂಗಳೂರಿನ ನಗರದಲ್ಲಿ ಉದ್ಯಮಿಯೋರ್ವರು ತಮ್ಮ ಕಚೇರಿಯ ಪೀಠೋಪಕರಣ ಮಾಡಿಸಲು ತಮ್ಮ ಮನೆಯ ಆವರಣದಲ್ಲಿ ಇದ್ದ ಸಾಗುವಾನಿ ಮರವನ್ನು ಕಡಿಯಲು ಅರಣ್ಯ ಇಲಾಖೆಗೆ ಅನುಮತಿ ಕೋರಿ ಪತ್ರ ಬರೆದಿದ್ದರು. ಮಂಗಳೂರು ನಗರದ ಅರಣ್ಯ ಇಲಾಖೆ ಈ ಪತ್ರವನ್ನು ಕಂದಾಯ ಇಲಾಖೆಗೆ ಕಳಿಸಿತ್ತು. ತಿಂಗಳು ಕಳೆದರೂ ಸ್ಥಳ ಪರಿಶೀಲನೆಗೆ ಸರ್ವೇಯರ್ ಗಂಗಾಧರ್ ಬಂದಿರಲಿಲ್ಲ. ಈ ಬಗ್ಗೆ ಕೇಳಿದಾಗ 3 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕಂದಾಯ ಇಲಾಖೆಗೆ ಕಟ್ಟಬೇಕಾದ 600 ರೂ. ಜೊತೆಗೆ ಲಂಚದ ಹಣ 3 ಸಾವಿರ ರೂ. ನೀಡಿ ಮತ್ತೊಂದು ತಿಂಗಳು ಕಳೆಯಿತು. ಮತ್ತೆ ಮರ ಇರುವ ಸ್ಥಳದ ನಕಾಶೆ ನೀಡಲು 30 ಸಾವಿರ ರೂ. ಡಿಮ್ಯಾಂಡ್ ಇಟ್ಟಿದ್ದರು.

ಪೊಗರು ಚಿತ್ರದಲ್ಲಿ ಬ್ರಾಹ್ಮಣರ ಬಗ್ಗೆ ವಿವಾದಾತ್ಮಕ ದೃಶ್ಯ : ಹಿಂದೂಗಳನ್ನ ಅವಮಾನಿಸೋದು ಫ್ಯಾಷನ್​ ಆಗಿಬಿಟ್ಟಿದೆ : ಪೊಗರು ವಿರುದ್ಧ ಶೋಭಾ ಕರಂದ್ಲಾಜೆ – Vishwanews24

ಇದರಿಂದ ಮನ ನೊಂದ ಉದ್ಯಮಿ, ಮಂಗಳೂರಿನ ಪರಿಸರ ಸಂರಕ್ಷಣಾ ಸದಸ್ಯರ ಗಮನಕ್ಕೆ ಈ ವಿಚಾರವನ್ನು ತಂದಿದ್ದರು. ತಕ್ಷಣ ಇದನ್ನು ಮಂಗಳೂರಿನ ಎಸಿಬಿ ಇನ್ಸ್ ಪೆಕ್ಟರ್ ಶ್ಯಾಮಸುಂದರ್ ಅವರ ಗಮನಕ್ಕೆ ತರಲಾಯಿತು. 3 ದಿನಗಳ ಮುಂಜಾಗ್ರತಾ ಕಾರ್ಯಾಚರಣೆ ಮಾಡಿದ ಎಸಿಬಿ ಅಧಿಕಾರಿಗಳು ಮಂಗಳವಾರ 5.30ರ ಸುಮಾರಿಗೆ ಮಂಗಳೂರಿನ ಮಿನಿ ವಿಧಾನ ಸೌಧದ ಬಳಿ 20 ಸಾವಿರ ರೂ. ಲಂಚದ ಹಣ ಪಡೆದುಕೊಳ್ಳುವ ಸಮಯ ಸಾಕ್ಷಿ ಸಮೇತ ಸರ್ವೇಯರ್ ಗಂಗಾಧರ್ ಎಂ. ಅವರನ್ನು ಬಂಧಿಸಿದ್ದಾರೆ.

ಪುತ್ತೂರು: ಬಸ್‌ನಲ್ಲಿ ಪ್ರಯಾಣಿಸುವಾಗ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ; ಸುಳ್ಯದ ಅರೇಬಿಕ್ ಶಾಲಾ ಶಿಕ್ಷಕನ ಬಂಧನ -Vishwanews24

Vishwa News 24

Recent Posts

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ – vishwanews24

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್‌ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…

49 minutes ago

ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ – vishwanews24

ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…

1 hour ago

ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ – vishwanews24

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್…

1 hour ago

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ – vishwanews24

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…

2 hours ago

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…

2 hours ago

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

2 hours ago