Featured

ಮಂಗಳೂರು: ‘ಲವ್ ಜಿಹಾದ್, ಮತಾಂತರದ ವಿರುದ್ಧ ಹಿಂದೂಗಳ ಹೋರಾಟ ಎಂದಿಗೂ ನಿಲ್ಲದು  :  ಚೈತ್ರಾ ಕುಂದಾಪುರ -Vishwanews24

ಮಂಗಳೂರು: ‘ಲವ್ ಜಿಹಾದ್, ಮತಾಂತರದ ವಿರುದ್ಧ ಹಿಂದೂಗಳ ಹೋರಾಟ ಎಂದಿಗೂ ನಿಲ್ಲದು  :  ಚೈತ್ರಾ ಕುಂದಾಪುರ

ಭಜರಂಗದಳದ ಕಾರ್ಯಕರ್ತರ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಇರಿ..

ಮಂಗಳೂರು : ಲವ್ ಜಿಹಾದ್, ಮತಾಂತರಗೊಳಿಸುವ ಜಿಹಾದಿಗಳಿಗೆ ಮುಂದಿನ ದಿನಗಳಲ್ಲಿ ದುರ್ಗಾವಾಹಿನಿ ಕಾರ್ಯಕರ್ತೆಯರ ಮುಖಾಂತರ ಏಟು ತಿನ್ನಲ್ಲು ಸಿದ್ದರಾಗಿರಬೇಕು. ಹಿಂದೂ ಸಮಾಜದ ಹೆಣ್ಣು ಮಕ್ಕಳನ್ನು ಪ್ರೀತಿಯ ನೆಪದಲ್ಲಿ ಯಾಮಾರಿಸಿ ಮತಾಂತರಿಸುವ ಮುಸ್ಲಿಮ್ ಜಿಹಾದಿಗಳಿಗೆ ಉತ್ತರವಾಗಿ ನಿಮ್ಮ ಮನೆಯ ಹೆಣ್ಣುಮಕ್ಕಳನ್ನು ಕೂಡಾ ಪ್ರೀತಿಸಿ ಅವರಿಗೆ ತಿಲಕವಿಡುವುದು ಕೂಡಾ ಹಿಂದೂ ಸಮಾಜದವರಿಗೂ ಗೊತ್ತಿದೆ. ಜಿಹಾದಿಗಳ ಲವ್ ಜಿಹಾದ್, ಮತಾಂತರದ ವಿರುದ್ಧ ಹಿಂದೂ ಸಮಾಜದ ಹೋರಾಟ ಎಂದಿಗೂ ನಿಲ್ಲದು ಎಂದು ಚೈತ್ರಾ ಕುಂದಾಪುರ ಎಚ್ಚರಿಸಿದ್ದಾರೆ.

ಬಜರಂಗ ದಳ, ದುರ್ಗಾ ವಾಹಿನಿಯಿಂದ ಸುರತ್ಕಲ್ ನಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಬಜರಂಗದಳದ ಕಾರ್ಯಕರ್ತರು ಅಲೆಮಾರಿಗಳು ಮತ್ತು ಪುಡಿ ರೌಡಿಗಳು ಎಂಬ ಟೀಕೆಗಳನ್ನು ನಾವು ಕೇಳುತ್ತಲೇ ಇದ್ದೇವೆ. ಆದರೆ ಸಂಘಟನೆಯ ಕಾರ್ಯಕರ್ತರು ತಮ್ಮ ತಾಯ್ನಾಡಿನ ರಕ್ಷಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಕೋವಿಡ್ 19 ಸೋಂಕಿನ ಕಷ್ಟದ ಸಮಯದಲ್ಲಿ ಅನೇಕರಿಗೆ ಸಹಾಯ ಮಡಿದ್ದಾರೆ. ಭಜರಂಗದಳದ ಕಾರ್ಯಕರ್ತರು ಎಂದಿಗೂ ಗಾಂಜಾ ಅಥವಾ ಇನ್ನಿತರ ಚಟುವಟಿಕೆಗಳಲ್ಲಿ ತೊಡಗಿಕೊಂಡಿಲ್ಲ. ಅವರ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಇರಿ” ಎಂದಿದ್ದಾರೆ.

ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಮಾತನಾಡಿ, “ಡ್ರಗ್ಸ್ ಮತ್ತು ಲವ್ ಜಿಹಾದ್, ಧಾರ್ಮಿಕ ಧರ್ಮಾಂಧರ ವಿರುದ್ಧ ನಮ್ಮ ಸಂಘಟನೆಗಳು ಹೋರಾಡುತ್ತವೆ. ವಾಹನಗಳನ್ನು ಅಡ್ಡಗಟ್ಟಿದ ನಂತರ ನಾವು ಎಂದಿಗೂ ನೈತಿಕ ಪೊಲೀಸ್ ಗಿರಿ ಅಥವಾ ಜನರ ಮೇಲೆ ದಾಳಿ ನಡೆಸಲಿಲ್ಲ. ಡ್ರಗ್ಸ್ ಹಾಗೂ ಲವ್ ಜಿಹಾದ್ ಅನ್ನು ಕರಾವಳಿ ಕರ್ನಾಟಕದಿಂದ ದೂರವಿಡಲಾಗಿದೆ” ಎಂದರು.

ತುಳು ಅಕಾಡೆಮಿ ಸದಸ್ಯೆ ಶಾಂತಿ ಶೆಟ್ಟಿ ಮಾತನಡಿ, ಹಿಂದೂ ಸಮಾಜವು ಒಟ್ಟಾಗಿ ಧಾರ್ಮಿಕ ಪರಿವರ್ತನೆ ಮತ್ತು ಲವ್ ಜಿಹಾದ್ ವಿರುದ್ಧ ಹೋರಾಡಬೇಕೆಂದು ಕರೆ ನೀಡಿದರು. ಅನೇಕ ಹಿಂದುಗಳು ತಮ್ಮದೇ ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾರೆ ಎಂದು ಅವರು ವಿಷಾದಿಸಿದರು.

ಮತಾಂತರ ಮತ್ತು ಲವ್ ಜಿಹಾದ್ ನಿಲ್ಲಿಸುವ ಗುರಿಯನ್ನು ಹೊಂದಿರುವ ಕಾನೂನನ್ನು ಬಲಪಡಿಸಲು ಕೋರಿ ರಾಜ್ಯ ಗೃಹ ಸಚಿವರಿಗೆ ತಿಳಿಸಿದ ಪತ್ರವನ್ನು ಶಾಸಕ ವೈ ಭರತ್ ಶೆಟ್ಟಿ ಮೂಲಕ ಹಸ್ತಾಂತರಿಸಲಾಯಿತು.

ಭಜರಂಗದಳ ವಿಭಾಗೀಯ ಸಂಚಾಲಕ ಭುಜಂಗ ಕುಲಾಲ್, ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಗೋಪಾಲ್, ದುರ್ಗಾವಾಹಿನಿ ಜಿಲ್ಲಾ ಸಂಚಾಲಕಿ ಶ್ವೇತಾ, ಮತ್ತು ವಿಶ್ವ ಹಿಂದೂ ಪರಿಷತ್ ಸುರತ್ಕಲ್ ಘಟಕದ ಕಾರ್ಯದರ್ಶಿ ಜಯರಾಮ ಆಚಾರ್ಯ ಉಪಸ್ಥಿತರಿದ್ದರು.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

13 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

16 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

16 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

16 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

17 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

17 hours ago