ಮಂಗಳೂರು: ಕೊರೊನಾ ನಿಯಂತ್ರಣಕ್ಕೆ ಮುಂದಿನ ಒಂದು ವಾರ ನಿರ್ಣಾಯಕವಾಗಿರುವುದರಿಂದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಠಿಣ ನಿಯಂತ್ರಣ ಹಾಕಿದ್ದು ಜೂ.೮ ರ ಮಂಗಳವಾರ ಒಂದೇದಿನ ಲಾಕ್ ಡೌನ್ ನಿಯಮ ಉಲ್ಲಂಘಿಸಿ ಸಂಚರಿಸಿದ 77 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದು 78,050 ರೂಪಾಯಿ ದಂಡ ಸಂಗ್ರಹಿಸಿದ್ದಾರೆ.
ಇನ್ನು ಮೊಟಾರು ವಾಹನ ಕಾಯಿದೆಯಡಿ 47,900 ರೂ. ದಂಡ ವಸೂಲಿ ಮಾಡಿದ್ದಾರೆ. ಇದಲ್ಲದೆ ಮಾಸ್ಕ್ ಧರಿಸಿದ 487 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಅಡಿ 8 ಹಾಗೂ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ 4 ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಪಾಸಿಟಿವಿಟಿ ದರ ಶೇ. 20 ರಿಂದ 21ರಷ್ಟಿದ್ದು, ಇದನ್ನು ಶೇಕಡಾ 5ಕ್ಕೆ ಇಳಿಸುವುದು ಅನಿವಾರ್ಯವಾಗಿದೆ. ಹೀಗಾಗಿ ಮುಂದಿನ ಒಂದು ವಾರ ನಿರ್ಣಾಯಕವಾಗಿರುವುದರಿಂದ ಜೂ.14 ರವರೆಗೆ ಲಾಕ್ ಡೌನ್ ನಿಯಮಗಳನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಈ ಹಿಂದೆಯೇ ಎಚ್ಚರಿಕೆ ನೀಡಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…