ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯ ಮುಂದೆ 2017ರ ಎ.4ರಂದು ನಡೆದ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದ್ದು, ಎಲ್ಲಾ 101 ಆರೋಪಿಗಳನ್ನು ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ.
ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಅಹ್ಮದ್ ಖುರೇಶಿ ಎಂಬಾತನನ್ನು ಅಕ್ರಮವಾಗಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸದೆ ದೌರ್ಜನ್ಯ ನಡೆಸಿದ್ದರು ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೆಲವು ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ಕಮಿಷನರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲು ಮುಂದಾಗಿದ್ದರು.
ಇದನ್ನೂ ಓದಿ :
ಈ ಸಂದರ್ಭ ಪರಿಸ್ಥಿತಿ ಉದ್ವಿಗ್ನಗೊಂಡ ಬಳಿಕ ಕಲ್ಲುತೂರಾಟ ನಡೆದಿದೆ ಎಂಬ ಆರೋಪದಲ್ಲಿ ಹಲವರ ಮೇಲೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ 101 ಮಂದಿಯ ವಿರುದ್ಧ ಅಂತಿಮ ವರದಿ ಸಲ್ಲಿಸಲಾಗಿತ್ತು. ಆ ಪೈಕಿ ಎರಡು ಪ್ರಕರಣಗಳು ಎರಡನೇ ಜೆಎಂಎಫ್ಸಿ ನ್ಯಾಯಾಲಯ ಮತ್ತು ಇನ್ನೊಂದು ಪ್ರಕರಣದ ಬಗ್ಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು.
ಆರೋಪಗಳನ್ನು ಸಾಬೀತುಪಡಿಸಲು ಸರಕಾರಿ ಪರ ವಕೀಲರು ವಿಫಲವಾಗಿದ್ದಾರೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟು ಪ್ರಕರಣದಿಂದ ಆರೋಪಿಗಳನ್ನು ಖುಲಾಸೆಗೊಳಿಸಿದ್ದಾರೆ.
ಇದನ್ನೂ ಓದಿ :
ಆರೋಪಿಗಳ ಪರವಾಗಿ ಮಂಗಳೂರಿನ ಲೆಕ್ಸ್ ಜೂರಿಸ್ ವಕೀಲರಾದ ಆಸಿಫ್ ಬೈಕಾಡಿ, ಮುಫೀದಾ ರಹ್ಮಾನ್, ಇರ್ಷಾದ್ ಸಖಾಫಿ ಮೊಂಟೆಪದವು, ಅಯಾಝ್ ಚಾರ್ಮಾಡಿ, ಮುಹಮ್ಮದ್ ಆದಿಲ್, ನಿಶಾನ್ ಎಂ.ಕೆ, ರುಬೀನ, ಅಂಸೀನ ವಾದಿಸಿದ್ದರು.
ಯುಪಿಐ ಹೊಸ ರೂಲ್ಸ್ : 10000 ಹಣ ವರ್ಗಾವಣೆಗೆ 1 ಗಂಟೆ ಕಾಯಬೇಕು ನವದೆಹಲಿ: ಇನ್ಮುಂದೆ ಯುಪಿಐ ಮೂಲಕ 10,000…
ಎಷ್ಟೇ ಆಸ್ತಿ, ಅಂತಸ್ತು ಇದ್ದರೂ ಮಾನಸಿಕ ನೆಮ್ಮದಿ ದೊರಕಲು ದೇವರ ಅನುಗ್ರಹ ಅತ್ಯವಶ್ಯಕ : ವಿನಯ ಕುಮಾರ್ ಸೊರಕೆ ಉಡುಪಿ:…
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…