ಮಂಗಳೂರು: ಲಾರಿ ಢಿಕ್ಕಿ ; ಪಾದಚಾರಿ ಸಾವು – Vishwanews24
ಮಂಗಳೂರು: ಲಾರಿ ಢಿಕ್ಕಿ ; ಪಾದಚಾರಿ ಸಾವು
ಮಂಗಳೂರು: ನಗರದ ಕೊಟ್ಟಾರ ಚೌಕಿಯಲ್ಲಿ ಇಂದು ಮುಂಜಾನೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಅಶೋಕನಗರದ ನಿವಾಸಿ ಎನ್ನಲಾದ ಸುಮಾರು 40-45 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ತನ್ನ ಆಯಕ್ಟಿವಾ ದ್ವಿಚಕ್ರ ವಾಹನವನ್ನು ರಸ್ತೆ ಪಕ್ಕ ನಿಲ್ಲಿಸಿ ವಾಕಿಂಗ್ ನಿರತರಾಗಿದ್ದ ವೇಳೆ ಹರ್ಯಾಣದ ನೋಂದಣಿ ಹೊಂದಿದ ಲಾರಿ ಢಿಕ್ಕಿ ಹೊಡೆಯಿತು ಎಂದು ತಿಳಿದುಬಂದಿದೆ.
ಇದರಿಂದ ಪಾದಚಾರಿ ವ್ಯಕ್ತಿಯು ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಪರೀಕ್ಷಿಸಿದ ವೈದ್ಯರು ಗಾಯಾಳು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಸಂಚಾರ ಉತ್ತರ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
