Featured

ಮಂಗಳೂರು: ಲೇಡಿಗೋಶನ್ ಆಸ್ಪತ್ರೆಯಲ್ಲಿ ಮಗು ಮಾರಾಟವಾಗಿಲ್ಲ: ಅಧೀಕ್ಷಕರ ಸ್ಪಷ್ಟನೆ – vishwanews24

ಮಂಗಳೂರು: ಲೇಡಿಗೋಶನ್ ಆಸ್ಪತ್ರೆಯಲ್ಲಿ ಮಗು ಮಾರಾಟವಾಗಿಲ್ಲ: ಅಧೀಕ್ಷಕರ ಸ್ಪಷ್ಟನೆ

ಮಂಗಳೂರು: ನಗರದ ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ತನ್ನ ಮಗು ಮಾರಾಟವಾಗಿದೆ ಎಂದು ಭವ್ಯಾ ಎಂಬಾಕೆ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುದ್ದಿ ಸುಳ್ಳಾಗಿದೆ. ಆಕೆಯ ಈ ಆರೋಪವು ಸಂಪೂರ್ಣ ನಿರಾಧಾರವಾಗಿದೆ ಎಂದು ಸರಕಾರಿ ಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಸ್ಪಷ್ಟಪಡಿಸಿದ್ದಾರೆ.

ಆ.18ರಂದು ಬೆಳಗ್ಗೆ 9.58ಕ್ಕೆ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಭವ್ಯಾ ಹೆಣ್ಣು ಮಗುವಿಗೆ ಜನ್ಮ ನೀಡಿದರು. ಬಳಿಕ ಮಗುವಿಗೆ ಒಂದು ಕಣ್ಣು ಗುಡ್ಡೆ ಇಲ್ಲದಿರುವುದನ್ನು ತಜ್ಞರು ಆಕೆಗೆ ತಿಳಿಸಿದ ಸಂದರ್ಭ ಆ ಶಿಶು ತನ್ನದಲ್ಲವೆಂದು ಆಕೆ ನಿರಾಕ ರಿಸಿದ್ದರು. ತನ್ನ ಮಗುವನ್ನು ಆಸ್ಪತ್ರೆಯ ಸಿಬ್ಬಂದಿ ಅದಲು ಬದಲು ಮಾಡಿರುತ್ತಾರೆ ಎಂದು ಸುಳ್ಳು ಆರೋಪವನ್ನು ಹೊರಿಸಿ ದ್ದರು. ಈ ವಿಚಾರದಲ್ಲಿ ಪೊಲೀಸ್ ತನಿಖೆ ನಡೆದು ನ್ಯಾಯಾಧೀಶರ ಉಪಸ್ಥಿತಿಯಲ್ಲಿ ಡಿಎನ್‌ಎ ಪರೀಕ್ಷೆ ಮಾಡುವ ಸಲು ವಾಗಿ ಪ್ರಕ್ರಿಯೆಯನ್ನು ನಡೆಸಲಾಗಿದೆ. ಡಿಎನ್‌ಎ ಪರೀಕ್ಷೆಯ ವರದಿಯನ್ನು ನೇರವಾಗಿ ತನಿಖಾಧಿಕಾರಿಗಳ ಮೂಲಕ ನ್ಯಾಯಾಲಯಕ್ಕೆ ಸಂಬಂಧಿತರು ನೀಡಿದ್ದರು.

ಈ ಮಧ್ಯೆ ಭವ್ಯಾ ಶಿಶುವು ದ.ಕ.ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸುಪರ್ದಿಯಲ್ಲಿದೆ. ಇತ್ತೀಚಿನ ಎರಡು ದಿನಗಳಲ್ಲಿ ಭವ್ಯಾ ತನ್ನ ಶಿಶುವನ್ನು ಸರಕಾರಿ ಲೇಡಿಗೋಶನ್ ಆಸ್ಪತ್ರೆಯ ಸಿಬ್ಬಂದಿ ಮಾರಾಟ ಮಾಡಿರುತ್ತಾರೆ ಎಂದು ಮಾನಹಾನಿಕರ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿತ್ತರಿಸುತ್ತಾ, ಸಮಾಜದಲ್ಲಿ ಗೊಂದಲದ ವಾತಾವರಣವನ್ನು ಸೃಷ್ಟಿ ಮಾಡುತ್ತಿ ದ್ದಾರೆ. ಅಲ್ಲದೆ ಹೆರಿಗೆ ಮತ್ತು ಸ್ತ್ರೀರೋಗ ಸಂಬಂಧ ವಿಚಾರದಲ್ಲಿ ಅತ್ಯುತ್ತಮ ಸೇವೆಯನ್ನು ಸಲ್ಲಿಸುತ್ತಾ ಬಂದಿರುವ ಸರಕಾರಿ ಸ್ವಾಮ್ಯದ ಸರಕಾರಿ ಲೇಡಿಗೋಶನ್ ಆಸ್ಪತ್ರೆಗೆ ಕಳಂಕವನ್ನು ತರುವ ವಿಚಾರಗಳು ಖೇದಕರ. ಈ ಪ್ರಕರಣವು ನ್ಯಾಯಾಲಯದ ಪರಾಮರ್ಶೆಯ ಹಂತದಲ್ಲಿರುವ ಕಾರಣ ನ್ಯಾಯಾಲಯದ ತೀರ್ಪನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಅಧೀಕ್ಷಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

5 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago