ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋತರೂ ನಾವು ನೈತಿಕವಾಗಿ ಗೆದ್ದಿದ್ದೇವೆ : ರಮಾನಾಥ ರೈ – vishwanews24
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋತರೂ ನಾವು ನೈತಿಕವಾಗಿ ಗೆದ್ದಿದ್ದೇವೆ : ರಮಾನಾಥ ರೈ
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋತರೂ ನಾವು ನೈತಿಕವಾಗಿ ಗೆದ್ದಿದ್ದೇವೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.
ಚುನಾವಣಾ ಫಲಿತಾಂಶದ ಕುರಿತು ಮಂಗಳೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ನೈತಿಕವಾಗಿ ಸೋತಿದ್ದಾರೆ. ಚಾರ್ ಸೊ ಪಾರ್ ಅನ್ನುತ್ತಿದ್ದವರು ಈಗ ಅಧಿಕಾರ ಉಳಿಸಿಕೊಳ್ಳುವ ಸ್ಥಿತಿಗೆ ಬಂದಿದ್ದಾರೆ ಎಂದರು.
ಬೇರೆ ಬೇರೆ ರೀತಿಯಲ್ಲಿ ನಮ್ಮ ಒಕ್ಕೂಟವನ್ನ ಸೋಲಿಸುವ ಕೆಲಸ ಮಾಡಿದ್ದಾರೆ. ಇಡಿ, ಐಟಿ ಬಳಸಿ ನಮ್ಮ ಬ್ಯಾಂಕ್ ಖಾತೆ, ಹಣವನ್ನ ಫ್ರೀಜ್ ಮಾಡುವ ಕೆಲಸ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನರೇಂದ್ರ ಮೋದಿ – vishwanews24
