ಮಂಗಳೂರು : ರಾಜಕೀಯ ಅಧಿಕಾರಕ್ಕೋಸ್ಕರ ಕಾಂಗ್ರೆಸ್ ಉಚಿತ ಯೋಜನೆ ಜಾರಿಗೆ ತಂದಿದೆ. ಆದರೆ ಗ್ಯಾರೆಂಟಿ ಯೋಜನೆಗಳಿಗೆ ಅನುದಾನ ಹೇಗೆ ತರುತ್ತಾರೆ ಎಂಬುವುದು ಪ್ರಶ್ನೆಯಾಗಿದೆ. ಆರ್ಥಿಕ ಅನುಕೂಲ ಹೇಗೆ ಮಾಡುತ್ತಾರೆ ಎಂಬುದನ್ನು ಕಾದು ನೋಡೋಣ ಎಂದು ಪುತ್ತೂರಿನಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ, ಹಿಂದು ಸಂಘಟಕ ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ.
ರಾಜ್ಯಾದ್ಯಂತ ಮದ್ಯ ಮಾರಾಟದ ಬೆಲೆಯನ್ನು 20 ರೂಪಾಯಿ ಏರಿಕೆ ಮಾಡಿದ್ದಾರೆ. ಇಂತಹ ಇನ್ನಷ್ಟು ಏರಿಕೆಗಳು ರಾಜ್ಯದಲ್ಲಿ ಆಗಬಹುದು. ಇದೀಗ ವಿದ್ಯುತ್ ದರ ಏರಿಕೆ ಆಗಿರುವುದು ರಾಜ್ಯಾದ್ಯಂತ ಚರ್ಚೆಯಾಗುತ್ತಿದೆ.
ದಕ್ಷಿಣ ಕನ್ನಡ ಸಂಸದ ಸ್ಥಾನಕ್ಕೆ ಪುತ್ತಿಲ ಅಭ್ಯರ್ಥಿ ಆಗಬೇಕು ಎಂಬ ಒತ್ತಡಕ್ಕೆ ಉತ್ತರಿಸಿದ ಅವರು ದ.ಕ ಲೋಕಸಭಾ ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆ ಬಿಜೆಪಿ ಹೈಕಮಾಂಡಿಗೆ ಬಿಟ್ಟು ವಿಚಾರ. ಸಾಮಾಜಿಕ ವ್ಯವಸ್ಥೆಯಲ್ಲಿ ಕಾರ್ಯಕರ್ತರಿಗೆ ಅಭ್ಯರ್ಥಿ ಯಾರು ಎಂದು ನಿರೀಕ್ಷೆ ಇರೋದು ಸಹಜ. ಪಕ್ಷ ಯಾರಿಗೆ ಟಿಕೆಟ್ ಕೊಡುತ್ತದೆ ಎಂದು ಮುಂದಿನ ದಿನದಲ್ಲಿ ಕಾದು ನೋಡೋಣ ಎಂದರು.
ಮಾಜಿ ಸಿಎಂ ಸದಾನಂದ ಗೌಡ ಬಿಜೆಪಿ ಮೇಲೆ ಬೇಸರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ರಾಜಕೀಯ ವ್ಯವಸ್ಥೆಯಲ್ಲಿ ಗೌರವ ಮತ್ತು ಶಿಕ್ಷೆ ಎರಡೂ ಸಿಗುತ್ತದೆ. ಸದಾನಂದ ಗೌಡ ಏನು ಮಾಡಿದ್ದಾರೆ ಎಂದು ಕರ್ನಾಟಕ ಜನತೆಗೆ ಗೊತ್ತಿದೆ. ಅವರ ನಿರ್ಧಾರ ಅವರಿಗೆ ಬಿಟ್ಟದ್ದು ನಾನು ಪ್ರತಿಕ್ರಿಯೆ ನೀಡಲ್ಲ ಎಂದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…