Featured

ಮಂಗಳೂರು: ವಾಮಂಜೂರು ಸಮೀಪದ ಕೆತ್ತಿಕಲ್‌’ನಲ್ಲಿ ಐತಿಹಾಸಿಕ ಕಲ್ಲು ಪತ್ತೆ – vishwanews24

ಮಂಗಳೂರು: ವಾಮಂಜೂರು ಸಮೀಪದ ಕೆತ್ತಿಕಲ್‌’ನಲ್ಲಿ ಐತಿಹಾಸಿಕ ಕಲ್ಲು ಪತ್ತೆ

ಮಂಗಳೂರು : ನಗರದ ವಾಮಂಜೂರು ಸಮೀಪದ ಕೆತ್ತಿಕಲ್‌ನಲ್ಲಿ ಆ ಊರಿಗೆ ಹೆಸರು ಬರಲು ಕಾರಣ ಎನ್ನಲಾದ ಕಲ್ಲೊಂದು ಪತ್ತೆಯಾಗಿದೆ.

ಸೋಮವಾರದಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಹೆದ್ದಾರಿ ವಿಸ್ತರಣೆ ಕಾಮಗಾರಿಗಾಗಿ ಗಿಡಗಂಟಿಗಳ ತೆರವುಗೊಳಿಸುವಾಗ ಈ ಕಲ್ಲು ಪತ್ತೆಯಾಗಿದೆ.

ಕೆತ್ತಿಕಲ್‌ ಎಂಬ ಹೆಸರಿಗೂ ಈ ಕೆತ್ತಿರುವ ಕಲ್ಲೇ ಕಾರಣ ಎನ್ನುತ್ತಾರೆ ಸ್ಥಳೀಯರು.ಮೇಲ್ನೋಟಕ್ಕೆ ಒಂದು ಪೀಠದ ಮೇಲೆ ಇದ್ದು ಶಿವಲಿಂಗದಂತೆ ಕಂಡುಬಂದರೂ ಕಪ್ಪುಕಲ್ಲಿನಲ್ಲಿ ಮಾಡಿದ್ದಲ್ಲ, ಬದಲಿಗೆ ಕೆಂಪುಕಲ್ಲಿನಲ್ಲಿ ವೃತ್ತಾಕಾರದಲ್ಲಿ ಕೆತ್ತಲಾಗಿದೆ. ಕಲ್ಲಿನಲ್ಲಿ ಯಾವುದೇ ಶಾಸನ ಬರೆದಿರುವುದು ಕಂಡು ಬಂದಿಲ್ಲ. ” ಬಹಳ ಹಿಂದೆ ಎತ್ತಿನಗಾಡಿಯಲ್ಲಿ ಪಯಣಿಸುವ ಕಾಲದಲ್ಲಿ ಜನರು ಇಲ್ಲಿ ಕುಳಿತು ವಿಶ್ರಾಂತಿ ಪಡೆದು ಮುಂದೆ ಸಾಗುತ್ತಿದ್ದರೆಂದು ನಮ್ಮ ಹಿರಿಯರು ಹೇಳುತ್ತಿದ್ದರು” ಎನ್ನುತ್ತಾರೆ ಸ್ಥಳೀಯರು.

ಕೆತ್ತಿಕಲ್‌ಗೆ ನೂರಾರು ವರ್ಷಗಳ ಚರಿತ್ರೆ ಇದ್ದು, ಕಲ್ಲನ್ನು ತತ್‌ಕ್ಷಣ ತೆರವು ಮಾಡದೇ, ಗೌರವಯುತವಾಗಿ ಸ್ಥಳಾಂತರ ಮಾಡಬೇಕು ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಲ್ಲಿ ಸ್ಥಳೀಯರು ಆಗ್ರಹಿಸಿದ್ದು, ಇದಕ್ಕೊಪ್ಪಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಕ್ರೇನ್‌ ಹಾಗೂ ಹಗ್ಗ ಬಳಸಿಕೊಂಡು ಕಲ್ಲನ್ನು ಸ್ಥಳಾಂತರಿಸುತ್ತೇವೆ, ಯಾವುದೇ ಹಾನಿ ಮಾಡುವುದಿಲ್ಲ ಎಂದು ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.

Vishwa News 24

Recent Posts

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ – vishwanews24

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…

51 minutes ago

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ – vishwanews24

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…

1 hour ago

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ – vishwanews24

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ಬೆಂಗಳೂರು: ಚಿಕನ್ ಪ್ರಿಯರೇ ಎಚ್ಚರವಾಗೀರಿ. ರಾಜ್ಯಕ್ಕೆ H5N1 ವೈರಸ್…

2 hours ago

ಕಾಪು : ಕಾರು-ಲಾರಿ ಮಧ್ಯೆ ಭೀಕರ ಅಪಘಾತ  – ಓರ್ವ ಸಾವು, ಇಬ್ಬರು ಗಂಭೀರ – vishwanews24

ಕಾಪು : ಕಾರು-ಲಾರಿ ಮಧ್ಯೆ ಭೀಕರ ಸ್ತೆ  ಅಪಘಾತ  - ಓರ್ವ ಸಾವು, ಇಬ್ಬರು ಗಂಭೀರ ಕಾಪು: ಮಂಗಳೂರು-ಉಡುಪಿ ರಾಷ್ಟ್ರೀಯ…

3 hours ago

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ – vishwanews24

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ…

23 hours ago

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…

23 hours ago