ಮಂಗಳೂರು : ನಗರದ ವಾಮಂಜೂರು ಸಮೀಪದ ಕೆತ್ತಿಕಲ್ನಲ್ಲಿ ಆ ಊರಿಗೆ ಹೆಸರು ಬರಲು ಕಾರಣ ಎನ್ನಲಾದ ಕಲ್ಲೊಂದು ಪತ್ತೆಯಾಗಿದೆ.
ಸೋಮವಾರದಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಹೆದ್ದಾರಿ ವಿಸ್ತರಣೆ ಕಾಮಗಾರಿಗಾಗಿ ಗಿಡಗಂಟಿಗಳ ತೆರವುಗೊಳಿಸುವಾಗ ಈ ಕಲ್ಲು ಪತ್ತೆಯಾಗಿದೆ.
ಕೆತ್ತಿಕಲ್ ಎಂಬ ಹೆಸರಿಗೂ ಈ ಕೆತ್ತಿರುವ ಕಲ್ಲೇ ಕಾರಣ ಎನ್ನುತ್ತಾರೆ ಸ್ಥಳೀಯರು.ಮೇಲ್ನೋಟಕ್ಕೆ ಒಂದು ಪೀಠದ ಮೇಲೆ ಇದ್ದು ಶಿವಲಿಂಗದಂತೆ ಕಂಡುಬಂದರೂ ಕಪ್ಪುಕಲ್ಲಿನಲ್ಲಿ ಮಾಡಿದ್ದಲ್ಲ, ಬದಲಿಗೆ ಕೆಂಪುಕಲ್ಲಿನಲ್ಲಿ ವೃತ್ತಾಕಾರದಲ್ಲಿ ಕೆತ್ತಲಾಗಿದೆ. ಕಲ್ಲಿನಲ್ಲಿ ಯಾವುದೇ ಶಾಸನ ಬರೆದಿರುವುದು ಕಂಡು ಬಂದಿಲ್ಲ. ” ಬಹಳ ಹಿಂದೆ ಎತ್ತಿನಗಾಡಿಯಲ್ಲಿ ಪಯಣಿಸುವ ಕಾಲದಲ್ಲಿ ಜನರು ಇಲ್ಲಿ ಕುಳಿತು ವಿಶ್ರಾಂತಿ ಪಡೆದು ಮುಂದೆ ಸಾಗುತ್ತಿದ್ದರೆಂದು ನಮ್ಮ ಹಿರಿಯರು ಹೇಳುತ್ತಿದ್ದರು” ಎನ್ನುತ್ತಾರೆ ಸ್ಥಳೀಯರು.
ಕೆತ್ತಿಕಲ್ಗೆ ನೂರಾರು ವರ್ಷಗಳ ಚರಿತ್ರೆ ಇದ್ದು, ಕಲ್ಲನ್ನು ತತ್ಕ್ಷಣ ತೆರವು ಮಾಡದೇ, ಗೌರವಯುತವಾಗಿ ಸ್ಥಳಾಂತರ ಮಾಡಬೇಕು ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಲ್ಲಿ ಸ್ಥಳೀಯರು ಆಗ್ರಹಿಸಿದ್ದು, ಇದಕ್ಕೊಪ್ಪಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಕ್ರೇನ್ ಹಾಗೂ ಹಗ್ಗ ಬಳಸಿಕೊಂಡು ಕಲ್ಲನ್ನು ಸ್ಥಳಾಂತರಿಸುತ್ತೇವೆ, ಯಾವುದೇ ಹಾನಿ ಮಾಡುವುದಿಲ್ಲ ಎಂದು ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …