ಮಂಗಳೂರು : ಕೋವಿಡ್ ಸಾಂಕ್ರಮಿಕ ರೋಗವನ್ನು ಎದುರಿಸಲು ವಾರಾಂತ್ಯದ ಕರ್ಫ್ಯೂ ಮತ್ತು ಲಾಕ್ಡೌನ್ ಪರಿಹಾರವಲ್ಲ, ಸರ್ಕಾರ ಪರ್ಯಾಯ ಯೋಜನೆ ಜಾರಿಗೆ ತರಬೇಕು ಎಂದು ಮಾಜಿ ಶಾಸಕ ರಮಾನಾಥ್ ರೈ ಹೇಳಿದ್ದಾರೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಜ. 11 ರ ಮಂಗಳವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು,ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ವಿಧಿಸುವ ವಾರಾಂತ್ಯದ ಕರ್ಫ್ಯೂ ಮತ್ತು ಲಾಕ್ಡೌನ್ ಮುಂತಾದ ಕಠಿಣ ಕ್ರಮಗಳು ಸಾರ್ವಜನಿಕರ ಮೇಲೆ ಪರಿಣಾಮ ಬೀರುತ್ತದೆ. ಈ ಹಿಂದೆ ವಿಧಿಸಲಾಗಿದ್ದ ಲಾಕ್ಡೌನ್ನಿಂದ ಬಹಳಷ್ಟು ಜನರು ಉದ್ಯೋಗ, ವ್ಯವಹಾರಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನಜೀವನಕ್ಕೆ ತೊಂದರೆಯಾಗುವಂತ ವಾರಾಂತ್ಯದ ಕರ್ಫ್ಯೂ ಮತ್ತು ಲಾಕ್ಡೌನ್ ವಿಧಿಸುವ ಮುನ್ನ ಸರ್ಕಾರ ಮರುಚಿಂತನೆ ಮಾಡಬೇಕು ಎಂದು ಹೇಳಿದ್ದಾರೆ.
“ಲಾಕ್ಡೌನ್, ವಿಕೇಂಡ್ ಕರ್ಫ್ಯೂ ವಿಧಿಸುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಯಕ್ಷಗಾನ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಯಾವುದೇ ಅನುಭವ ಇಲ್ಲದಿರುವುದೇ ಲಾಕ್ಡೌನ್ಗೆ ಕಾರಣವಾಯಿತು ಎಂದು ಡಾ ಸುಧಾಕರ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈಗಾಗಲೇ ಲಾಕ್ಡೌನ್ ಮತ್ತು ನೋಟು ಅಮಾನ್ಯೀಕರಣದ ಸಂದರ್ಭದಲ್ಲಿ ಅನೇಕರ ಸಾವಿಗೆ ನಾವು ಸಾಕ್ಷಿಯಾಗಿದ್ದೇವೆ. ಹೀಗಾಗಿ ಸರ್ಕಾರವು ಲಾಕ್ಡೌನ್ ಮತ್ತು ವಾರಾಂತ್ಯದ ಕರ್ಫ್ಯೂ ಜಾರಿಗೆ ತರುವ ಮುನ್ನ ಮುಂದಾಲೋಚಿಸಿಬೇಕು. ಸಾಂಕ್ರಾಮಿಕ ರೋಗವನ್ನು ಎದುರಿಸಲು ಸರ್ಕಾರ ಪರ್ಯಾಯ ಮಾರ್ಗ ಜಾರಿಗೆ ತರಬೇಕು. ಯಾವುದೇ ನಿರ್ಬಂಧ ವಿಧಿಸುವ ಮುನ್ನ ಸರ್ಕಾರ ಸಾರ್ವಜನಿಕರಿಗೂ ಸೂಕ್ತ ಸೌಲಭ್ಯಗಳನ್ನು ನೀಡಬೇಕು ” ಎಂದು ರೈ ಸಲಹೆ ನೀಡಿದ್ದಾರೆ.
ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು, : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…
ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…
ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…
ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…