Featured

ಮಂಗಳೂರು : ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲ ; ಧ್ವಜಸಂಹಿತೆಯನ್ನು ಪಾಲಿಸದಿದ್ದರೆ ಪ್ರಕರಣ ದಾಖಲು – Vishwanews24

ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲ..

ಪ್ಲಾಸ್ಟಿಕ್ ಧ್ವಜ ಹಾರಾಟಕ್ಕೂ ಅಸ್ಪದವಿಲ್ಲ..

ಧ್ವಜಸಂಹಿತೆಯನ್ನು ಪಾಲಿಸದಿದ್ದರೆ ಪ್ರಕರಣ ದಾಖಲು..

ರಾಷ್ಟ್ರಧ್ವಜಕ್ಕೆ ಅಗೌರವ, ನಾಶ, ಅಪಕೀರ್ತಿ, ಹರಿದು ಹಾಕಿದರೆ ಕ್ರಿಮಿನಲ್ ಕೇಸು ದಾಖಲು..

ಕನಿಷ್ಠ 3 ವರ್ಷ ಜೈಲು ಶಿಕ್ಷೆ..

ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್..

ಮಂಗಳೂರು: ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲ. ಅದೇ ರೀತಿ ಎಲ್ಲಿಯೂ ಕೂಡಾ ಪ್ಲಾಸ್ಟಿಕ್ ಧ್ವಜ ಹಾರಾಟಕ್ಕೂ ಅಸ್ಪದವಿಲ್ಲ. ಈ ಧ್ವಜಸಂಹಿತೆಯನ್ನು ಪಾಲಿಸದಿದ್ದರೆ ಪ್ರಕರಣ ದಾಖಲಿಸಲಾಗುವುದು ಎಂದು ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹೇಳಿದರು.

ಈ ಬಗ್ಗೆ ಮಾತನಾಡಿರುವ ಅವರು ‘ಎಲ್ಲರೂ ಮನೆಗಳಲ್ಲಿ ಹಾಗೂ ಕಟ್ಟಡಗಳಲ್ಲಿ ಧ್ವಜ ಹಾರಿಸುವುದಕ್ಕೆ ತೊಂದರೆ ಇಲ್ಲ. ಆದರೆ ನಿಯಮವನ್ನು ಮೀರಿದರೆ ಮಾತ್ರ ಜೈಲುಶಿಕ್ಷೆ ಅಷ್ಟೇ ಅಲ್ಲದೆ ರಾಷ್ಟ್ರಧ್ವಜಕ್ಕೆ ಅಗೌರವ, ನಾಶ, ಅಪಕೀರ್ತಿ, ಹರಿದು ಹಾಕಿದರೆ ಕ್ರಿಮಿನಲ್ ಕೇಸು ದಾಖಲಿಸಲು ಅವಕಾಶವಿದೆ.

ಇದಕ್ಕೆ ಯಾರ ಅನುಮತಿಯೂ ಬೇಕಾಗಿಲ್ಲ. ಯಾರೇ ನಾಗರಿಕ ದೂರು ನೀಡಿದರೂ ಸಾಕಾಗುತ್ತದೆ. ಪೊಲೀಸರು ಕ್ರಿಮಿನಲ್ ಕೇಸು ದಾಖಲಿಸಿ ಜೈಲಿಗೆ ಅಟ್ಟಲು ಅವಕಾಶವಿದೆ. ಕನಿಷ್ಠ 3 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಹಾಗಾಗಿ ಆ.13ರಿಂದ 15ರವರೆಗೆ ಧ್ವಜಾರೋಹಣ ನಡೆಸಿ ಇಳಿಸಿದ ಬಳಿಕ ಧ್ವಜವನ್ನು ಎಸೆಯದೆ, ಜೋಪಾನವಾಗಿ ಮನೆಯಲ್ಲೇ ಇರಿಸಬೇಕು’ ಎಂದು ಹೇಳಿದರು.

ಕಾಮನ್ವೆಲ್ತ್ ಗೇಮ್ಸ್ ಗೆ ಅದ್ಧೂರಿ ತೆರೆ : 61 ಪದಕಗಳೊಂದಿಗೆ 4ನೇ ಸ್ಥಾನ ಪಡೆದ ಭಾರತ – Vishwanews24

ಸರ್ಕಾರದ ನಿಯಮದಂತೆ ಅತಿ ಗಣ್ಯರ ವಾಹನಗಳಲ್ಲಿ ಮಾತ್ರ ಎದುರು ಭಾಗದಲ್ಲಿ ಧ್ವಜ ಹಾಕಬಹುದು. ಆದರೆ ವಾಹನದ ಒಳಭಾಗದಲ್ಲಿ ಸ್ಟೇರಿಂಗ್ ಎದುರು ಮಾತ್ರ ಪುಟ್ಟ ಧ್ವಜ ಹಾಕಲು ಅಡ್ಡಿ ಇಲ್ಲ. ಕೈಮಗ್ಗ, ಖಾದಿ, ಉಣ್ಣೆ, ಪಾಲಿಸ್ಟರ್ ಧ್ವಜ ಹಾಕಲು ಅವಕಾಶ ಇದೆ. ಇಲ್ಲಿ ಪಾಲಿಸ್ಟರ್ , ಖಾದಿ, ಕಾಟನ್ ಧ್ವಜ ನೀಡಲಾಗುತ್ತಿದೆ. ರಾಷ್ಟ್ರಧ್ವಜ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿರುವುದರಿಂದ ಸ್ವಾತಂತ್ರ್ಯೋತ್ಸವದ ಅಮೃತೋತ್ಸವ ಸಂದರ್ಭ ರಾತ್ರಿಯೂ ಇಳಿಸದೆ ಧ್ವಜ ಹಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

Vishwa News 24

View Comments

  • ಸರಿಯಾಗಿ ಮಾಹಿತಿ ನೀಡಿ ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲವೋ ಅಥವಾ ಪ್ಲಾಸ್ಟಿಕ್ ಧ್ವಜ ಹಾರಿಸಲು ಅವಕಾಶವಿಲ್ಲವೋ ಎಂದೂ

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

5 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

5 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

5 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

5 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago