Featured

ಮಂಗಳೂರು : ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲ ; ಧ್ವಜಸಂಹಿತೆಯನ್ನು ಪಾಲಿಸದಿದ್ದರೆ ಪ್ರಕರಣ ದಾಖಲು – Vishwanews24

ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲ..

ಪ್ಲಾಸ್ಟಿಕ್ ಧ್ವಜ ಹಾರಾಟಕ್ಕೂ ಅಸ್ಪದವಿಲ್ಲ..

ಧ್ವಜಸಂಹಿತೆಯನ್ನು ಪಾಲಿಸದಿದ್ದರೆ ಪ್ರಕರಣ ದಾಖಲು..

ರಾಷ್ಟ್ರಧ್ವಜಕ್ಕೆ ಅಗೌರವ, ನಾಶ, ಅಪಕೀರ್ತಿ, ಹರಿದು ಹಾಕಿದರೆ ಕ್ರಿಮಿನಲ್ ಕೇಸು ದಾಖಲು..

ಕನಿಷ್ಠ 3 ವರ್ಷ ಜೈಲು ಶಿಕ್ಷೆ..

ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್..

ಮಂಗಳೂರು: ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲ. ಅದೇ ರೀತಿ ಎಲ್ಲಿಯೂ ಕೂಡಾ ಪ್ಲಾಸ್ಟಿಕ್ ಧ್ವಜ ಹಾರಾಟಕ್ಕೂ ಅಸ್ಪದವಿಲ್ಲ. ಈ ಧ್ವಜಸಂಹಿತೆಯನ್ನು ಪಾಲಿಸದಿದ್ದರೆ ಪ್ರಕರಣ ದಾಖಲಿಸಲಾಗುವುದು ಎಂದು ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹೇಳಿದರು.

ಈ ಬಗ್ಗೆ ಮಾತನಾಡಿರುವ ಅವರು ‘ಎಲ್ಲರೂ ಮನೆಗಳಲ್ಲಿ ಹಾಗೂ ಕಟ್ಟಡಗಳಲ್ಲಿ ಧ್ವಜ ಹಾರಿಸುವುದಕ್ಕೆ ತೊಂದರೆ ಇಲ್ಲ. ಆದರೆ ನಿಯಮವನ್ನು ಮೀರಿದರೆ ಮಾತ್ರ ಜೈಲುಶಿಕ್ಷೆ ಅಷ್ಟೇ ಅಲ್ಲದೆ ರಾಷ್ಟ್ರಧ್ವಜಕ್ಕೆ ಅಗೌರವ, ನಾಶ, ಅಪಕೀರ್ತಿ, ಹರಿದು ಹಾಕಿದರೆ ಕ್ರಿಮಿನಲ್ ಕೇಸು ದಾಖಲಿಸಲು ಅವಕಾಶವಿದೆ.

ಇದಕ್ಕೆ ಯಾರ ಅನುಮತಿಯೂ ಬೇಕಾಗಿಲ್ಲ. ಯಾರೇ ನಾಗರಿಕ ದೂರು ನೀಡಿದರೂ ಸಾಕಾಗುತ್ತದೆ. ಪೊಲೀಸರು ಕ್ರಿಮಿನಲ್ ಕೇಸು ದಾಖಲಿಸಿ ಜೈಲಿಗೆ ಅಟ್ಟಲು ಅವಕಾಶವಿದೆ. ಕನಿಷ್ಠ 3 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಹಾಗಾಗಿ ಆ.13ರಿಂದ 15ರವರೆಗೆ ಧ್ವಜಾರೋಹಣ ನಡೆಸಿ ಇಳಿಸಿದ ಬಳಿಕ ಧ್ವಜವನ್ನು ಎಸೆಯದೆ, ಜೋಪಾನವಾಗಿ ಮನೆಯಲ್ಲೇ ಇರಿಸಬೇಕು’ ಎಂದು ಹೇಳಿದರು.

ಕಾಮನ್ವೆಲ್ತ್ ಗೇಮ್ಸ್ ಗೆ ಅದ್ಧೂರಿ ತೆರೆ : 61 ಪದಕಗಳೊಂದಿಗೆ 4ನೇ ಸ್ಥಾನ ಪಡೆದ ಭಾರತ – Vishwanews24

ಸರ್ಕಾರದ ನಿಯಮದಂತೆ ಅತಿ ಗಣ್ಯರ ವಾಹನಗಳಲ್ಲಿ ಮಾತ್ರ ಎದುರು ಭಾಗದಲ್ಲಿ ಧ್ವಜ ಹಾಕಬಹುದು. ಆದರೆ ವಾಹನದ ಒಳಭಾಗದಲ್ಲಿ ಸ್ಟೇರಿಂಗ್ ಎದುರು ಮಾತ್ರ ಪುಟ್ಟ ಧ್ವಜ ಹಾಕಲು ಅಡ್ಡಿ ಇಲ್ಲ. ಕೈಮಗ್ಗ, ಖಾದಿ, ಉಣ್ಣೆ, ಪಾಲಿಸ್ಟರ್ ಧ್ವಜ ಹಾಕಲು ಅವಕಾಶ ಇದೆ. ಇಲ್ಲಿ ಪಾಲಿಸ್ಟರ್ , ಖಾದಿ, ಕಾಟನ್ ಧ್ವಜ ನೀಡಲಾಗುತ್ತಿದೆ. ರಾಷ್ಟ್ರಧ್ವಜ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿರುವುದರಿಂದ ಸ್ವಾತಂತ್ರ್ಯೋತ್ಸವದ ಅಮೃತೋತ್ಸವ ಸಂದರ್ಭ ರಾತ್ರಿಯೂ ಇಳಿಸದೆ ಧ್ವಜ ಹಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

Vishwa News 24

View Comments

  • ಸರಿಯಾಗಿ ಮಾಹಿತಿ ನೀಡಿ ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲವೋ ಅಥವಾ ಪ್ಲಾಸ್ಟಿಕ್ ಧ್ವಜ ಹಾರಿಸಲು ಅವಕಾಶವಿಲ್ಲವೋ ಎಂದೂ

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

17 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago