Featured

ಮಂಗಳೂರು : ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲ ; ಧ್ವಜಸಂಹಿತೆಯನ್ನು ಪಾಲಿಸದಿದ್ದರೆ ಪ್ರಕರಣ ದಾಖಲು – Vishwanews24

ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲ..

ಪ್ಲಾಸ್ಟಿಕ್ ಧ್ವಜ ಹಾರಾಟಕ್ಕೂ ಅಸ್ಪದವಿಲ್ಲ..

ಧ್ವಜಸಂಹಿತೆಯನ್ನು ಪಾಲಿಸದಿದ್ದರೆ ಪ್ರಕರಣ ದಾಖಲು..

ರಾಷ್ಟ್ರಧ್ವಜಕ್ಕೆ ಅಗೌರವ, ನಾಶ, ಅಪಕೀರ್ತಿ, ಹರಿದು ಹಾಕಿದರೆ ಕ್ರಿಮಿನಲ್ ಕೇಸು ದಾಖಲು..

ಕನಿಷ್ಠ 3 ವರ್ಷ ಜೈಲು ಶಿಕ್ಷೆ..

ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್..

ಮಂಗಳೂರು: ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲ. ಅದೇ ರೀತಿ ಎಲ್ಲಿಯೂ ಕೂಡಾ ಪ್ಲಾಸ್ಟಿಕ್ ಧ್ವಜ ಹಾರಾಟಕ್ಕೂ ಅಸ್ಪದವಿಲ್ಲ. ಈ ಧ್ವಜಸಂಹಿತೆಯನ್ನು ಪಾಲಿಸದಿದ್ದರೆ ಪ್ರಕರಣ ದಾಖಲಿಸಲಾಗುವುದು ಎಂದು ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹೇಳಿದರು.

ಈ ಬಗ್ಗೆ ಮಾತನಾಡಿರುವ ಅವರು ‘ಎಲ್ಲರೂ ಮನೆಗಳಲ್ಲಿ ಹಾಗೂ ಕಟ್ಟಡಗಳಲ್ಲಿ ಧ್ವಜ ಹಾರಿಸುವುದಕ್ಕೆ ತೊಂದರೆ ಇಲ್ಲ. ಆದರೆ ನಿಯಮವನ್ನು ಮೀರಿದರೆ ಮಾತ್ರ ಜೈಲುಶಿಕ್ಷೆ ಅಷ್ಟೇ ಅಲ್ಲದೆ ರಾಷ್ಟ್ರಧ್ವಜಕ್ಕೆ ಅಗೌರವ, ನಾಶ, ಅಪಕೀರ್ತಿ, ಹರಿದು ಹಾಕಿದರೆ ಕ್ರಿಮಿನಲ್ ಕೇಸು ದಾಖಲಿಸಲು ಅವಕಾಶವಿದೆ.

ಇದಕ್ಕೆ ಯಾರ ಅನುಮತಿಯೂ ಬೇಕಾಗಿಲ್ಲ. ಯಾರೇ ನಾಗರಿಕ ದೂರು ನೀಡಿದರೂ ಸಾಕಾಗುತ್ತದೆ. ಪೊಲೀಸರು ಕ್ರಿಮಿನಲ್ ಕೇಸು ದಾಖಲಿಸಿ ಜೈಲಿಗೆ ಅಟ್ಟಲು ಅವಕಾಶವಿದೆ. ಕನಿಷ್ಠ 3 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಹಾಗಾಗಿ ಆ.13ರಿಂದ 15ರವರೆಗೆ ಧ್ವಜಾರೋಹಣ ನಡೆಸಿ ಇಳಿಸಿದ ಬಳಿಕ ಧ್ವಜವನ್ನು ಎಸೆಯದೆ, ಜೋಪಾನವಾಗಿ ಮನೆಯಲ್ಲೇ ಇರಿಸಬೇಕು’ ಎಂದು ಹೇಳಿದರು.

ಕಾಮನ್ವೆಲ್ತ್ ಗೇಮ್ಸ್ ಗೆ ಅದ್ಧೂರಿ ತೆರೆ : 61 ಪದಕಗಳೊಂದಿಗೆ 4ನೇ ಸ್ಥಾನ ಪಡೆದ ಭಾರತ – Vishwanews24

ಸರ್ಕಾರದ ನಿಯಮದಂತೆ ಅತಿ ಗಣ್ಯರ ವಾಹನಗಳಲ್ಲಿ ಮಾತ್ರ ಎದುರು ಭಾಗದಲ್ಲಿ ಧ್ವಜ ಹಾಕಬಹುದು. ಆದರೆ ವಾಹನದ ಒಳಭಾಗದಲ್ಲಿ ಸ್ಟೇರಿಂಗ್ ಎದುರು ಮಾತ್ರ ಪುಟ್ಟ ಧ್ವಜ ಹಾಕಲು ಅಡ್ಡಿ ಇಲ್ಲ. ಕೈಮಗ್ಗ, ಖಾದಿ, ಉಣ್ಣೆ, ಪಾಲಿಸ್ಟರ್ ಧ್ವಜ ಹಾಕಲು ಅವಕಾಶ ಇದೆ. ಇಲ್ಲಿ ಪಾಲಿಸ್ಟರ್ , ಖಾದಿ, ಕಾಟನ್ ಧ್ವಜ ನೀಡಲಾಗುತ್ತಿದೆ. ರಾಷ್ಟ್ರಧ್ವಜ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿರುವುದರಿಂದ ಸ್ವಾತಂತ್ರ್ಯೋತ್ಸವದ ಅಮೃತೋತ್ಸವ ಸಂದರ್ಭ ರಾತ್ರಿಯೂ ಇಳಿಸದೆ ಧ್ವಜ ಹಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

Vishwa News 24

View Comments

  • ಸರಿಯಾಗಿ ಮಾಹಿತಿ ನೀಡಿ ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲವೋ ಅಥವಾ ಪ್ಲಾಸ್ಟಿಕ್ ಧ್ವಜ ಹಾರಿಸಲು ಅವಕಾಶವಿಲ್ಲವೋ ಎಂದೂ

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago