ಮಂಗಳೂರು : ವಾಹನ ಚಲಾಯಿಸುತ್ತಿದ್ದ ಸಂದರ್ಭ ಹೃದಯಾಘಾತಕ್ಕೆ ಒಳಗಾಗೀ ಟ್ಯಾಕ್ಸಿ ಚಾಲಕ ಸಾವನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಸಂದರ್ಭ ನಡೆದ ಅಪಘಾತದಲ್ಲಿ ಅದೃಷ್ಟವಶಾತ್ ಹೆಚ್ಚಿನ ಅವಘಡ ಸಂಭವಿಸಿಲ್ಲ.
ಮಂಗಳೂರಿನ ಪಾಂಡೇಶ್ವರ ನಿವಾಸಿ ಮೊಹಮ್ಮದ್ ಶರೀಫ್ (57) ಮೃತಪಟ್ಟವರು. ಮಂಗಳೂರಿನಲ್ಲಿ ಟ್ಯಾಕ್ಸಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ನಗರದ ಮಂಗಳಾದೇವಿಯಲ್ಲಿ ಕಾರು ಚಲಾಯಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕಾರು ಚಲಾಯಿಸುತ್ತಿದ್ದಾಗಲೇ ಮೊಹಮ್ಮದ್ ಶರೀಫ್ ಅವರಿಗೆ ಹೃದಯಾಘಾತವಾಗಿದೆ.
ಈ ಸಂದರ್ಭದಲ್ಲಿ ಕಾರನ್ನು ನಿಲ್ಲಿಸಲು ಸಾಧ್ಯವಾಗದೆ ಇವರ ಕಾರು ಟೆಂಪೋಗೆ ಡಿಕ್ಕಿ ಹೊಡೆದಿದೆ. ಸ್ವಲ್ಪದರಲ್ಲಿ ಬಸ್ ಮತ್ತು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದು ತಪ್ಪಿದೆ. ಕಾರಿನಲ್ಲಿ ಮೂರ್ಛೆ ತಪ್ಪಿದ್ದ ಮೊಹಮ್ಮದ್ ಶರೀಫ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ. ಮಂಗಳೂರು ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ :
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…
ಬರ್ತ್ಡೇ, ಪ್ರಿವೆಡ್ಡಿಂಗ್ ಫೋಟೋಶೂಟ್ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್ ಡೆಕ್ಕರ್ ಅಂಬಾರಿ ಬಸ್! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…
ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…
ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…
ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…