ಮಂಗಳೂರು : ವಾಹನ ಚಲಾಯಿಸುತ್ತಿದ್ದ ಸಂದರ್ಭ ಹೃದಯಾಘಾತಕ್ಕೆ ಒಳಗಾಗೀ ಟ್ಯಾಕ್ಸಿ ಚಾಲಕ ಸಾವನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಸಂದರ್ಭ ನಡೆದ ಅಪಘಾತದಲ್ಲಿ ಅದೃಷ್ಟವಶಾತ್ ಹೆಚ್ಚಿನ ಅವಘಡ ಸಂಭವಿಸಿಲ್ಲ.
ಮಂಗಳೂರಿನ ಪಾಂಡೇಶ್ವರ ನಿವಾಸಿ ಮೊಹಮ್ಮದ್ ಶರೀಫ್ (57) ಮೃತಪಟ್ಟವರು. ಮಂಗಳೂರಿನಲ್ಲಿ ಟ್ಯಾಕ್ಸಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ನಗರದ ಮಂಗಳಾದೇವಿಯಲ್ಲಿ ಕಾರು ಚಲಾಯಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕಾರು ಚಲಾಯಿಸುತ್ತಿದ್ದಾಗಲೇ ಮೊಹಮ್ಮದ್ ಶರೀಫ್ ಅವರಿಗೆ ಹೃದಯಾಘಾತವಾಗಿದೆ.
ಈ ಸಂದರ್ಭದಲ್ಲಿ ಕಾರನ್ನು ನಿಲ್ಲಿಸಲು ಸಾಧ್ಯವಾಗದೆ ಇವರ ಕಾರು ಟೆಂಪೋಗೆ ಡಿಕ್ಕಿ ಹೊಡೆದಿದೆ. ಸ್ವಲ್ಪದರಲ್ಲಿ ಬಸ್ ಮತ್ತು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದು ತಪ್ಪಿದೆ. ಕಾರಿನಲ್ಲಿ ಮೂರ್ಛೆ ತಪ್ಪಿದ್ದ ಮೊಹಮ್ಮದ್ ಶರೀಫ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ. ಮಂಗಳೂರು ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ :
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…