ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳಿವೆ. ಇದರಿಂದಾಗಿ ಅಪಘಾತ, ದರೋಡೆ ರಸ್ತೆ ಅಪರಾಧ ಪ್ರಕರಣಗಳು ಏರಿಕೆಯಾಗುತ್ತಿದ್ದು, ಸಾರ್ವಜನಿಕರ ಸುರಕ್ಷತೆಯ ದೃಷ್ಠಿಯಿಂದ ಪೊಲೀಸ್ ಇಲಾಖೆ ಟ್ರಾಫಿಕ್ ಡ್ರೈವ್ ಹಮ್ಮಿಕೊಂಡಿದೆ.
ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದು, “ಸೆ.27ರಿಂದ ಅ.2ರವರೆಗೆ ಒಂದು ವಾರಗಳ ಕಾಲ ನಾವು ನಿರಂತರವಾಗಿ ಪ್ರತಿದಿನಕ್ಕೆ ಒಂದೊಂದು ಆದ್ಯತೆ ನೀಡಿ ಟ್ರಾಫಿಕ್ ಡ್ರೈವ್ ಮಾಡುತ್ತೇವೆ. ಸೋಮವಾರದಂದು ಟಿಂಟ್ ವಿರುದ್ದ ಕಾರ್ಯಾಚರಣೆ ನಡೆಯಲಿದೆ. ಸೆ.28ರಂದು ನಂಬರ್ ಪ್ಲೇಟ್ಗಳ ವಿರುದ್ದ ಕಾರ್ಯಾಚರಣೆ ನಡೆಯಲಿದೆ” ಎಂದಿದ್ದಾರೆ.
“ಸೆ.29ರಂದು ಹೆಲ್ಮೆಟ್ ವಿರುದ್ದ ಕಾರ್ಯಾಚರಣೆ. ಸೆ.30ರಂದು ಇನ್ಶುರೆನ್ಸ್ ತಪಾಸಣೆ, ಅ.1ರಂದು ಹಳೆ ಕೇಸ್ಗಳ ಪರಿಶೀಲನೆ ಹಾಗೂ ಅ.2ರಂದು ಹೊಗೆ ತಪಾಸಣೆಯ ಪರಿಶೀಲನೆ ನಡೆಸಲಾಗುತ್ತದೆ” ಎಂದು ತಿಳಿಸಿದ್ದಾರೆ.
“ಒಟ್ಟಿನಲ್ಲಿ ಮಂಗಳೂರು ನಗರವನ್ನು ಹೆಚ್ಚು ಸುರಕ್ಷಿತವಾಗಿರಿಸಲು, ಮಹಿಳೆಯರು, ಹಿರಿಯ ನಾಗರಿಕರು, ವಿದ್ಯಾರ್ಥಿಗಳಿಗೆ ಸುರಕ್ಷಿತೆ ಹೆಚ್ಚು ಮಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಎಲ್ಲರೂ ಇದಕ್ಕೆ ಸಹಕರಿಸಬೇಕು” ಎಂದು ಮನವಿ ಮಾಡಿದ್ದಾರೆ.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…