ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳಿವೆ. ಇದರಿಂದಾಗಿ ಅಪಘಾತ, ದರೋಡೆ ರಸ್ತೆ ಅಪರಾಧ ಪ್ರಕರಣಗಳು ಏರಿಕೆಯಾಗುತ್ತಿದ್ದು, ಸಾರ್ವಜನಿಕರ ಸುರಕ್ಷತೆಯ ದೃಷ್ಠಿಯಿಂದ ಪೊಲೀಸ್ ಇಲಾಖೆ ಟ್ರಾಫಿಕ್ ಡ್ರೈವ್ ಹಮ್ಮಿಕೊಂಡಿದೆ.
ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದು, “ಸೆ.27ರಿಂದ ಅ.2ರವರೆಗೆ ಒಂದು ವಾರಗಳ ಕಾಲ ನಾವು ನಿರಂತರವಾಗಿ ಪ್ರತಿದಿನಕ್ಕೆ ಒಂದೊಂದು ಆದ್ಯತೆ ನೀಡಿ ಟ್ರಾಫಿಕ್ ಡ್ರೈವ್ ಮಾಡುತ್ತೇವೆ. ಸೋಮವಾರದಂದು ಟಿಂಟ್ ವಿರುದ್ದ ಕಾರ್ಯಾಚರಣೆ ನಡೆಯಲಿದೆ. ಸೆ.28ರಂದು ನಂಬರ್ ಪ್ಲೇಟ್ಗಳ ವಿರುದ್ದ ಕಾರ್ಯಾಚರಣೆ ನಡೆಯಲಿದೆ” ಎಂದಿದ್ದಾರೆ.
“ಸೆ.29ರಂದು ಹೆಲ್ಮೆಟ್ ವಿರುದ್ದ ಕಾರ್ಯಾಚರಣೆ. ಸೆ.30ರಂದು ಇನ್ಶುರೆನ್ಸ್ ತಪಾಸಣೆ, ಅ.1ರಂದು ಹಳೆ ಕೇಸ್ಗಳ ಪರಿಶೀಲನೆ ಹಾಗೂ ಅ.2ರಂದು ಹೊಗೆ ತಪಾಸಣೆಯ ಪರಿಶೀಲನೆ ನಡೆಸಲಾಗುತ್ತದೆ” ಎಂದು ತಿಳಿಸಿದ್ದಾರೆ.
“ಒಟ್ಟಿನಲ್ಲಿ ಮಂಗಳೂರು ನಗರವನ್ನು ಹೆಚ್ಚು ಸುರಕ್ಷಿತವಾಗಿರಿಸಲು, ಮಹಿಳೆಯರು, ಹಿರಿಯ ನಾಗರಿಕರು, ವಿದ್ಯಾರ್ಥಿಗಳಿಗೆ ಸುರಕ್ಷಿತೆ ಹೆಚ್ಚು ಮಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಎಲ್ಲರೂ ಇದಕ್ಕೆ ಸಹಕರಿಸಬೇಕು” ಎಂದು ಮನವಿ ಮಾಡಿದ್ದಾರೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…