ಮಂಗಳೂರು: ಭಾರೀ ಪ್ರಮಾಣದ ಮತ್ತು ತರಿಸುವ ಡ್ರಗ್ಸ್ ಮಿಶ್ರಿತ ಒಂದು ಕ್ವಿಂಟಾಲ್ ಬಾಂಗ್ ಚಾಕ್ಲೇಟ್ಗಳನ್ನು ಪೊಲೀಸರು ವಶಪಡಿಸಿಕೊಂಡ ಪ್ರಕರಣ ಮಂಗಳೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ಕರ್ (45) ಹಾಗೂ ಮಂಗಳೂರಿನ ಕಾರ್ ಸ್ಟ್ರೀಟ್ ನಿವಾಸಿ ಮನೋಹರ್ ಶೇಟ್ (49) ಪೊಲೀಸರು ವಶಕ್ಕೆ ಪಡೆದ ಆರೋಪಿಗಳಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ನಗರದ ಕಾರ್ ಸ್ಟ್ರೀಟ್ ಹಾಗೂ ಹೈಲ್ಯಾಂಡ್ ಎಂಬಲ್ಲಿನ ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಚಾಕ್ಲೇಟ್ಗಳು ಪತ್ತೆಯಾಗಿವೆ. ಇವುಗಳನ್ನು ಕಾಲೇಜು ವಿದ್ಯಾರ್ಥಿಗಳಿಗೆ ರಹಸ್ಯವಾಗಿ ಮಾರಾಟ ಮಾಡಲಾಗುತ್ತಿತ್ತು. ಉತ್ತರ ಭಾರತದಿಂದ ಇವುಗಳನ್ನು ತರಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾಶಕ್ತಿ ಮುನಕ್ಕಾ, ಬಮ್ಬಮ್ ಮುನೆಕ್ಕಾವಟಿ, ಪಾವರ್ ಮುನಕ್ಕಾವಟಿ ಹಾಗೂ ಆನಂದ ಚೂರ್ಣ ಹೆಸರಿನಲ್ಲಿ ಈ ಚಾಕ್ಲೇಟ್ಗಳು ಪತ್ತೆಯಾಗಿವೆ. ಒಂದು ಚಾಕ್ಲೇಟ್ಗೆ 30 ರೂ.ನಂತೆ ಮಾರಾಟ ಮಾಡಲಾಗುತ್ತಿತ್ತು. ಚಾಕ್ಲೇಟ್ಗೆ ಅಮಲು ಪದಾರ್ಥ ಬೆರೆಸಿರುವ ಬಗ್ಗೆ ತಿಳಿಯಲು ಸ್ಯಾಂಪಲ್ನ್ನು ಎಫ್ಎಸ್ಎಲ್ಗೆ ರವಾನೆ ಮಾಡಲಾಗಿದೆ. ಇವುಗಳಲ್ಲಿ ಗಾಂಜಾ ವಿಶ್ರಣವಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…