ಮಂಗಳೂರು: ಭಾರೀ ಪ್ರಮಾಣದ ಮತ್ತು ತರಿಸುವ ಡ್ರಗ್ಸ್ ಮಿಶ್ರಿತ ಒಂದು ಕ್ವಿಂಟಾಲ್ ಬಾಂಗ್ ಚಾಕ್ಲೇಟ್ಗಳನ್ನು ಪೊಲೀಸರು ವಶಪಡಿಸಿಕೊಂಡ ಪ್ರಕರಣ ಮಂಗಳೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ಕರ್ (45) ಹಾಗೂ ಮಂಗಳೂರಿನ ಕಾರ್ ಸ್ಟ್ರೀಟ್ ನಿವಾಸಿ ಮನೋಹರ್ ಶೇಟ್ (49) ಪೊಲೀಸರು ವಶಕ್ಕೆ ಪಡೆದ ಆರೋಪಿಗಳಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ನಗರದ ಕಾರ್ ಸ್ಟ್ರೀಟ್ ಹಾಗೂ ಹೈಲ್ಯಾಂಡ್ ಎಂಬಲ್ಲಿನ ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಚಾಕ್ಲೇಟ್ಗಳು ಪತ್ತೆಯಾಗಿವೆ. ಇವುಗಳನ್ನು ಕಾಲೇಜು ವಿದ್ಯಾರ್ಥಿಗಳಿಗೆ ರಹಸ್ಯವಾಗಿ ಮಾರಾಟ ಮಾಡಲಾಗುತ್ತಿತ್ತು. ಉತ್ತರ ಭಾರತದಿಂದ ಇವುಗಳನ್ನು ತರಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾಶಕ್ತಿ ಮುನಕ್ಕಾ, ಬಮ್ಬಮ್ ಮುನೆಕ್ಕಾವಟಿ, ಪಾವರ್ ಮುನಕ್ಕಾವಟಿ ಹಾಗೂ ಆನಂದ ಚೂರ್ಣ ಹೆಸರಿನಲ್ಲಿ ಈ ಚಾಕ್ಲೇಟ್ಗಳು ಪತ್ತೆಯಾಗಿವೆ. ಒಂದು ಚಾಕ್ಲೇಟ್ಗೆ 30 ರೂ.ನಂತೆ ಮಾರಾಟ ಮಾಡಲಾಗುತ್ತಿತ್ತು. ಚಾಕ್ಲೇಟ್ಗೆ ಅಮಲು ಪದಾರ್ಥ ಬೆರೆಸಿರುವ ಬಗ್ಗೆ ತಿಳಿಯಲು ಸ್ಯಾಂಪಲ್ನ್ನು ಎಫ್ಎಸ್ಎಲ್ಗೆ ರವಾನೆ ಮಾಡಲಾಗಿದೆ. ಇವುಗಳಲ್ಲಿ ಗಾಂಜಾ ವಿಶ್ರಣವಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…