Featured

ಮಂಗಳೂರು: ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನ : ಆರೋಪಿ ವಕೀಲ ರಾಜೇಶ್ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆ – Vishwanews24

ಮಂಗಳೂರು: ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನ : ಆರೋಪಿ ವಕೀಲ ರಾಜೇಶ್

ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆ

ಮಂಗಳೂರು: ನಗರದ ಕಾನೂನು ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣದ ಆರೋಪಿ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ಮಂಗಳೂರಿನ ಜೆಎಂಎಫ್‌ಸಿ 3ನೇ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದೆ.

2021ರ ಸೆ.25ರಂದು ಮಧ್ಯಾಹ್ನ ರಾಜೇಶ್ ತನ್ನ ಮಂಗಳೂರಿನ ಕರಂಗಲ್ಪಾಡಿಯ ಕಚೇರಿಯಲ್ಲಿ ಇಂಟರ್ನ್‌ಶಿಪ್‌ಗೆಂದು ಬಂದಿದ್ದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಅತ್ಯಾಚಾರಕ್ಕೆ ಯತ್ನಿಸಿದಾಗ ಆಕೆ ತಪ್ಪಿಸಿಕೊಂಡು ಹೋಗಿದ್ದಳು. ಈ ಸಂದರ್ಭ ರಾಜೇಶ್ ಭಟ್ ಆಕೆಗೆ ಜೀವ ಬೆದರಿಕೆ ಹಾಕಿದ್ದ. ಅಲ್ಲದೆ ಕೃತ್ಯದ ಬಗ್ಗೆ ದೂರಿನ ವಿಚಾರವನ್ನು ಮುಕ್ತಾಯಗೊಳಿಸುವಂತೆ ಮಂಗಳೂರಿನ ವಕೀಲರ ಬಾರ್ ಅಸೋಸಿಯೇಶನ್‌ನ ಅಧ್ಯಕ್ಷರಿಗೆ ಒತ್ತಾಯದಲ್ಲಿ ಪತ್ರವನ್ನು ಬರೆಯಿಸಿಕೊಂಡು ಸಹಿ ಪಡೆದುಕೊಂಡಿದ್ದ. ಬಳಿಕ ಕೃತ್ಯವನ್ನು ಮರೆ ಮಾಚುವ ಉದ್ದೇಶದಿಂದ ವಿದ್ಯಾರ್ಥಿನಿಯ ಗೆಳತಿಯಿಂದ ಒತ್ತಾಯದಲ್ಲಿ ಸಹಿ ಪಡೆದುಕೊಂಡಿದ್ದ. ಕೃತ್ಯದ ಕುರಿತು ಆಡಿಯೋ ಪ್ರಸಾರ ಮಾಡಿರುವ ಬಗ್ಗೆಯೂ ಕೃತ್ಯವನ್ನು ಮರೆಮಾಚುವ ಉದ್ದೇಶದಿಂದ ಒತ್ತಾಯದಿಂದ ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದ ಎಂಬುದಾಗಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಉಡುಪಿ ರಜತ ಮಹೋತ್ಸವ ಕಾರ್ಯಕ್ರಮ ಹಬ್ಬದಂತೆ ಆಚರಣೆಗೆ ಶಾಸಕ ರಘುಪತಿ ಭಟ್ ಕರೆ – Vishwanews24

ಆರೋಪಿ ರಾಜೇಶ್ ತನ್ನ ಕಚೇರಿಯಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾವನ್ನು ಮೊಬೈಲ್‌ಗೆ ಸಂಪರ್ಕಿಸಿಕೊಂಡಿದ್ದ. ಅದರ ಮೂಲಕ ವಿದ್ಯಾರ್ಥಿನಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದುದನ್ನು ಕೂಡ ಲೈಂಗಿಕ ಉದ್ದೇಶದಿಂದ ನೋಡುತ್ತಿದ್ದ. ಅಲ್ಲದೆ ಆತ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ. ಆತನಿಗೆ ಅನಂತ ಭಟ್ ಮತ್ತು ಅಚ್ಚುತ್ತ ಭಟ್ ನೆರವು, ಆಶ್ರಯ ಒದಗಿಸಿದ್ದರು ಎಂದು ದೋಷಾರೋಪಣಾ ಪತ್ರದಲ್ಲಿ ತಿಳಿಸಲಾಗಿದೆ. ಒಟ್ಟು 110 ಮಂದಿ ಸಾಕ್ಷಿದಾರರನ್ನಾಗಿ ತೋರಿಸಲಾಗಿದೆ.

ಎಸಿಪಿಯಿಂದ ಚಾರ್ಜ್‌ಶೀಟ್ ಸಲ್ಲಿಕೆ : ಪ್ರಕರಣದ ಗಂಭೀರತೆ ಪರಿಗಣಿಸಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತನಿಖೆಯನ್ನು ಅಂದಿನ ಎಸಿಪಿ ರಂಜಿತ್ ಬಂಡಾರು ಅವರಿಗೆ ವಹಿಸಿದ್ದರು. ಅನಂತರ ಎಸಿಪಿ ದಿನಕರ ಶೆಟ್ಟಿ ತನಿಖೆ ಮುಂದುವರಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

12 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

12 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

12 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

12 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago