Featured

ಮಂಗಳೂರು: ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನ : ಆರೋಪಿ ವಕೀಲ ರಾಜೇಶ್ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆ – Vishwanews24

ಮಂಗಳೂರು: ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನ : ಆರೋಪಿ ವಕೀಲ ರಾಜೇಶ್

ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆ

ಮಂಗಳೂರು: ನಗರದ ಕಾನೂನು ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣದ ಆರೋಪಿ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ಮಂಗಳೂರಿನ ಜೆಎಂಎಫ್‌ಸಿ 3ನೇ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದೆ.

2021ರ ಸೆ.25ರಂದು ಮಧ್ಯಾಹ್ನ ರಾಜೇಶ್ ತನ್ನ ಮಂಗಳೂರಿನ ಕರಂಗಲ್ಪಾಡಿಯ ಕಚೇರಿಯಲ್ಲಿ ಇಂಟರ್ನ್‌ಶಿಪ್‌ಗೆಂದು ಬಂದಿದ್ದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಅತ್ಯಾಚಾರಕ್ಕೆ ಯತ್ನಿಸಿದಾಗ ಆಕೆ ತಪ್ಪಿಸಿಕೊಂಡು ಹೋಗಿದ್ದಳು. ಈ ಸಂದರ್ಭ ರಾಜೇಶ್ ಭಟ್ ಆಕೆಗೆ ಜೀವ ಬೆದರಿಕೆ ಹಾಕಿದ್ದ. ಅಲ್ಲದೆ ಕೃತ್ಯದ ಬಗ್ಗೆ ದೂರಿನ ವಿಚಾರವನ್ನು ಮುಕ್ತಾಯಗೊಳಿಸುವಂತೆ ಮಂಗಳೂರಿನ ವಕೀಲರ ಬಾರ್ ಅಸೋಸಿಯೇಶನ್‌ನ ಅಧ್ಯಕ್ಷರಿಗೆ ಒತ್ತಾಯದಲ್ಲಿ ಪತ್ರವನ್ನು ಬರೆಯಿಸಿಕೊಂಡು ಸಹಿ ಪಡೆದುಕೊಂಡಿದ್ದ. ಬಳಿಕ ಕೃತ್ಯವನ್ನು ಮರೆ ಮಾಚುವ ಉದ್ದೇಶದಿಂದ ವಿದ್ಯಾರ್ಥಿನಿಯ ಗೆಳತಿಯಿಂದ ಒತ್ತಾಯದಲ್ಲಿ ಸಹಿ ಪಡೆದುಕೊಂಡಿದ್ದ. ಕೃತ್ಯದ ಕುರಿತು ಆಡಿಯೋ ಪ್ರಸಾರ ಮಾಡಿರುವ ಬಗ್ಗೆಯೂ ಕೃತ್ಯವನ್ನು ಮರೆಮಾಚುವ ಉದ್ದೇಶದಿಂದ ಒತ್ತಾಯದಿಂದ ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದ ಎಂಬುದಾಗಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಉಡುಪಿ ರಜತ ಮಹೋತ್ಸವ ಕಾರ್ಯಕ್ರಮ ಹಬ್ಬದಂತೆ ಆಚರಣೆಗೆ ಶಾಸಕ ರಘುಪತಿ ಭಟ್ ಕರೆ – Vishwanews24

ಆರೋಪಿ ರಾಜೇಶ್ ತನ್ನ ಕಚೇರಿಯಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾವನ್ನು ಮೊಬೈಲ್‌ಗೆ ಸಂಪರ್ಕಿಸಿಕೊಂಡಿದ್ದ. ಅದರ ಮೂಲಕ ವಿದ್ಯಾರ್ಥಿನಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದುದನ್ನು ಕೂಡ ಲೈಂಗಿಕ ಉದ್ದೇಶದಿಂದ ನೋಡುತ್ತಿದ್ದ. ಅಲ್ಲದೆ ಆತ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ. ಆತನಿಗೆ ಅನಂತ ಭಟ್ ಮತ್ತು ಅಚ್ಚುತ್ತ ಭಟ್ ನೆರವು, ಆಶ್ರಯ ಒದಗಿಸಿದ್ದರು ಎಂದು ದೋಷಾರೋಪಣಾ ಪತ್ರದಲ್ಲಿ ತಿಳಿಸಲಾಗಿದೆ. ಒಟ್ಟು 110 ಮಂದಿ ಸಾಕ್ಷಿದಾರರನ್ನಾಗಿ ತೋರಿಸಲಾಗಿದೆ.

ಎಸಿಪಿಯಿಂದ ಚಾರ್ಜ್‌ಶೀಟ್ ಸಲ್ಲಿಕೆ : ಪ್ರಕರಣದ ಗಂಭೀರತೆ ಪರಿಗಣಿಸಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತನಿಖೆಯನ್ನು ಅಂದಿನ ಎಸಿಪಿ ರಂಜಿತ್ ಬಂಡಾರು ಅವರಿಗೆ ವಹಿಸಿದ್ದರು. ಅನಂತರ ಎಸಿಪಿ ದಿನಕರ ಶೆಟ್ಟಿ ತನಿಖೆ ಮುಂದುವರಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

10 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

11 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

11 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

11 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

11 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

11 hours ago