Featured

ಮಂಗಳೂರು: ವಿದ್ಯುತ್ ಕಾಮಗಾರಿ ನಿಮಿತ್ತ ಡಿ. 15 ರವರೆಗೆ ಹಗಲು ರೈಲು ಸೇವೆ ರದ್ದು – vishwanews24

ಮಂಗಳೂರು: ವಿದ್ಯುತ್ ಕಾಮಗಾರಿ ನಿಮಿತ್ತ ಡಿ. 15 ರವರೆಗೆ ಹಗಲು ರೈಲು ಸೇವೆ ರದ್ದು

ಮಂಗಳೂರು:ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ ಘಾಟ್ ವಿಭಾಗದಲ್ಲಿ ವಿದ್ಯುತ್ ಮಾರ್ಗ ಕಾಮಗಾರಿಗಾಗಿ ಡಿಸೆಂಬರ್ 15 ರವರೆಗೆ ಲೈನ್ ಬ್ಲಾಕ್ ವಿಧಿಸುವ ನೈರುತ್ಯ ರೈಲ್ವೆಯ ಪ್ರಸ್ತಾವನೆಯನ್ನು ರೈಲ್ವೆ ಸಚಿವಾಲಯ ಅನುಮೋದಿಸಿದೆ. ಪರಿಣಾಮವಾಗಿ, ಹಲವಾರು ಹಗಲಿನ ರೈಲುಗಳ ರದ್ದತಿಯನ್ನು ವಿಸ್ತರಿಸಲಾಗಿದೆ.

ರೈಲು ಸಂಖ್ಯೆ 16539 ಯಶವಂತಪುರ-ಮಂಗಳೂರು ಜಂಕ್ಷನ್ ಸಾಪ್ತಾಹಿಕ ರೈಲು ಡಿಸೆಂಬರ್ 13 ರವರೆಗೆ ರದ್ದಾಗಿದ್ದು, ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ರೈಲು ಡಿಸೆಂಬರ್ 14 ರವರೆಗೆ ರದ್ದಾಗಿದೆ. ರೈಲು ಸಂಖ್ಯೆ 16575 ರ ವಾರದಲ್ಲಿ ಮೂರು ದಿನ ಇರುವ ಯಶವಂತಪುರ-ಮಂಗಳೂರು ಜಂಕ್ಷನ್ ಗೋಮಟೇಶ್ವರ ಎಕ್ಸ್‌ಪ್ರೆಸ್ ಡಿಸೆಂಬರ್ 14 ರವರೆಗೆ ರದ್ದಾಗಿದ್ದು, ರೈಲು ಸಂಖ್ಯೆ 16576ರ ವಾರದಲ್ಲಿ ಮೂರು ದಿನ ಇರುವ ಮಂಗಳೂರು ಜಂಕ್ಷನ್-ಯಶವಂತಪುರದ ಗೋಮಟೇಶ್ವರ ಎಕ್ಸ್‌ಪ್ರೆಸ್ ಡಿಸೆಂಬರ್ 15 ರವರೆಗೆ ರದ್ದಾಗಿದೆ.

ಅದೇ ರೀತಿ, ರೈಲು ಸಂಖ್ಯೆ 16515ರ ವಾರದಲ್ಲಿ ಮೂರು ದಿನ ಇರುವ ಯಶವಂತಪುರ – ಕಾರವಾರ ರೈಲು ಡಿಸೆಂಬರ್ 15 ರವರೆಗೆ ರದ್ದಾಗಲಿದ್ದು, ರೈಲು ಸಂಖ್ಯೆ 16516ರ ವಾರದಲ್ಲಿ ಮೂರು ದಿನ ಇರುವ ಕಾರವಾರ – ಯಶವಂತಪುರ ರೈಲು ಡಿಸೆಂಬರ್ 16 ರವರೆಗೆ ರದ್ದಾಗಲಿದೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 minute ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

47 minutes ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

59 minutes ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

2 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

3 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

3 hours ago