ಮಂಗಳೂರು: ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಗರದ ರೊಸಾರಿಯೋ ಬಳಿ ಬುಧವಾರ ರಾತ್ರಿ 9 ಗಂಟೆ ವೇಳೆಗೆ ನಡೆದಿದ್ದು ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ.
ಮೃತರಿಬ್ಬರು ಆಟೋ ಚಾಲಕರಾಗಿದ್ದು, ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ(46) ಹಾಗೂ ಸಕಲೇಶಪುರದ ಪಾಲ್ಯ ನಿವಾಸಿ ರಾಜು(50) ಎಂದು ಗುರುತಿಸಲಾಗಿದೆ. ರೋಸಾರಿಯೋ ಶಾಲೆಯ ಹಿಂಭಾಗದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಿಕ್ಷಾ ಚಾಲಕರೊಬ್ಬರು ಆಟೋ ತೊಳಿಯುತ್ತಿರುವ ಸಮಯದಲ್ಲಿ ವಿದ್ಯುತ್ ತಂತಿಯೊಂದು ಅವರ ಮೇಲೆ ಕಡಿದು ಬಿದ್ದಿದೆ ಎನ್ನಲಾಗಿದೆ. ತಕ್ಷಣ ಅವರಿಗೆ ಓರ್ವರಿಗೆ ವಿದ್ಯುತ್ ಶಾಕ್ ತಗುಲಿದ್ದು ಅದನ್ನು ಕಂಡು ಮತ್ತೊಬ್ಬ ರಿಕ್ಷಾ ಚಾಲಕರು ಪ್ರಾಣ ಉಳಿಸಲು ಹೋಗಿ ತಮ್ಮ ಪ್ರಾಣವನ್ನು ಕೂಡ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಮೆಸ್ಕಾಂ ಹಾಗೂ ಪಾಲಿಕೆ ಅಧಿಕಾರಿಗಳು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ.
ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…