Featured

ಮಂಗಳೂರು : ವಿದ್ಯುತ್ ಮೀಟರ್ ದರ ಏರಿಕೆಯ ಮೂಲಕ ಜನರ ಹಸಿವಿನ ಹೊಟ್ಟೆಗೆ ದೊಣ್ಣೆಯಿಂದ ಹೊಡೆದಂತಾಗಿದೆ : ರಮಾನಾಥ ರೈ – Vishwanews24

ಮಂಗಳೂರು : ವಿದ್ಯುತ್ ಮೀಟರ್ ದರ ಏರಿಕೆಯ ಮೂಲಕ ಜನರ ಹಸಿವಿನ ಹೊಟ್ಟೆಗೆ ದೊಣ್ಣೆಯಿಂದ ಹೊಡೆದಂತಾಗಿದೆ : ರಮಾನಾಥ ರೈ – Vishwanews24

ಮಂಗಳೂರು : ಕೊರೋನ ಲಾಕ್‌ಡೌನ್, ಇಂಧನ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಸಂದರ್ಭದಲ್ಲೇ ವಿದ್ಯುತ್ ಮೀಟರ್ ದರ ಏರಿಕೆಯ ಮೂಲಕ ಜನರ ಹಸಿವಿನ ಹೊಟ್ಟೆಗೆ ದೊಣ್ಣೆಯಿಂದ ಹೊಡೆದಂತಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಒಂದು ಅವಧಿಯಲ್ಲಿ ಕಾಂಗ್ರೆಸ್ ಸರಕಾರ ರೈತರ ಪಂಪ್ ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡಿದೆ. ಕೊರೋನ ಸಂಕಷ್ಟದ ಹಿನ್ನೆಲೆಯಲ್ಲಿ ಕೆಲವು ರಾಜ್ಯಗಳಲ್ಲಿ ಲಾಕ್‌ಡೌನ್ ಅವಧಿಯ ವಿದ್ಯುತ್ ಬಿಲ್ ಮನ್ನಾ ಮಾಡಲಾಗಿದೆ. ಆದರೆ ನಮ್ಮ ರಾಜ್ಯದಲ್ಲಿ ಒಂದು ವರ್ಷದ ಅವಧಿಯಲ್ಲಿ ಎರಡು ಬಾರಿ ವಿದ್ಯುತ್ ದರ ಏರಿಕೆ ಮಾಡಲಾಗಿದೆ ಎಂದು ಆಕ್ಷೇಪಿಸಿದರು.

ಕಾಂಗ್ರೆಸ್ ಆಡಳಿತದಲ್ಲಿ ವಿದ್ಯುತ್ ಕಂಪೆನಿಗಳು ಉತ್ತಮ ವಾಗಿ ಕಾರ್ಯ ನಿರ್ವಹಿಸುತ್ತಿದ್ದವು. ಆದರೆ ಸದ್ಯ ಕಂಪೆನಿಗಳು ನಷ್ಟದಲ್ಲಿದ್ದರೆ ಅದಕ್ಕೆ ಆ ಕಂಪೆನಿಗಳ ಅದಕ್ಷತೆ ಹಾಗೂ ಭ್ರಷ್ಟಾಚಾರವೇ ಕಾರಣ ಎಂದು ಅವರು ಹೇಳಿದರು.

ರಾಜ್ಯದಲ್ಲಿ ವಿದ್ಯುತ್ ಬೇಡಿಕೆಗಿಂತ ಹೆಚ್ಚುವರಿಯಾಗಿ ಉತ್ಪಾದನೆಯಾಗುತ್ತದೆ. ಆದರೆ ಈ ನಡುವೆ ಅದಾನಿ ಕಂಪೆನಿ ಸೇರಿದಂತೆ ನಾನಾ ಕಂಪೆನಿಗಳಿಂದ ಸರಕಾರ ವಿದ್ಯುತ್ ಖರೀದಿಸುತ್ತಿದೆ. ಕಂಪೆನಿಗಳ ಅನುಕೂಲ ನೀತಿಯನ್ನು ಅನುಸರಿಸಿ ಜನರಿಗೆ ಸಂಕಷ್ಟ ಸಂದರ್ಭದಲ್ಲಿ ಹೊರೆ ನೀಡುತ್ತಿದೆ. ಸರಕಾರಕ್ಕೆ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ಇಲ್ಲ. ಬದಲಾಗಿ ವ್ಯಾಪಾರಿಗಳಂತೆ ಕಾರ್ಯ ನಿರ್ವಹಿಸುತ್ತಿದೆ ಎಂದು ರಮಾನಾಥ ರೈ ಆರೋಪಿಸಿದರು.

ಇಂಧನ ದರ ಏರಿಕೆಯಾಗಿ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರಿದೆ. ಇಂತಹ ಸಂದರ್ಭದಲ್ಲಿ ಸಕಾರಣವಿಲ್ಲದೆ ವಿದ್ಯುತ್ ದರ ಏರಿಕೆಯನ್ನು ಕೈಬಿಡಬೇಕು ಎಂದು ಅವರು ಆಗ್ರಹಿಸಿದರು.

ಮಾಜಿ ಶಾಸಕ ಜೆ.ಆರ್.ಲೋಬೋ ಮಾತನಾಡಿ, ಮೆಸ್ಕಾಂ, ಬೆಸ್ಕಾಂ ಹೊರತುಪಡಿಸಿ ಉಳಿದ ರಾಜ್ಯದ ವಿದ್ಯುತ್ ಸರಬರಾಜು ಕಂಪೆನಿಗಳು ನಷ್ಟದಲ್ಲಿರಲು ಅವುಗಳ ಅದಕ್ಷತೆಯೇ ಕಾರಣ. ಮೆಸ್ಕಾಂ ವ್ಯಾಪ್ತಿಯ ದ.ಕ. ಹಾಗೂ ಉಡುಪಿಯಲ್ಲಿ ಗ್ರಾಹಕರಿಂದ ಸಮರ್ಪಕವಾಗಿ ವಿದ್ಯುತ್ ದರ ಪಾವತಿಯಾಗುತ್ತದೆ. ಹಾಗಿದ್ದರೂ ನಷ್ಟದ ನೆಪವೊಡ್ಡಿ ದರ ಏರಿಕೆಯ ಮೂಲಕ ಹೊರೆ ಹೇರುವುದಕ್ಕೆ ಅರ್ಥವಿಲ್ಲ. ಇದಲ್ಲದೆ ಸೌರ ವಿದ್ಯುತ್ ಮೇಲಿನ ನೀತಿಯನ್ನು ಕೂಡಾ ಬದಲಾಯಿಸುವ ಮೂಲಕ ಲಕ್ಷಾಂತರ ರೂ. ಖರ್ಚು ಮಾಡಿ ಸೌರ ಶಕ್ತಿಯನ್ನು ಅಳವಡಿಸಿಕೊಂಡವರಿಗೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮುಖಂಡರಾದ ಶಶಿಧರ ಹೆಗ್ಡೆ, ಶಾಹುಲ್ ಹಮೀದ್, ಅಬ್ದುಲ್ ರವೂಫ್, ಭಾಸ್ಕರ್ ಕೆ., ಅಶೋಕ್ ಡಿ.ಕೆ., ಸದಾಶಿವ ಉಳ್ಳಾಲ್, ಅಪ್ಪಿ, ನವೀನ್ ಡಿಸೋಜ, ಪ್ರತಿಭಾ ಕುಳಾಯಿ, ಶಬೀರ್ ಸಿದ್ಧಕಟ್ಟೆ, ಬೇಬಿ ಕುಂದರ್, ಸುರೇಂದ್ರ ಕಾಂಬ್ಳಿ, ಅಬ್ಬಾಸ್ ಅಲಿ, ಲಾರೆನ್ಸ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

23 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago