Featured

ಮಂಗಳೂರು ವಿಮಾನ ನಿಲ್ದಾಣಕ್ಕೆ ಶ್ರೀ ಮಧ್ವ ಶಂಕರ ಹೆಸರಿಡಿ : ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀ -Vishwanews24

ಮಂಗಳೂರು ವಿಮಾನ ನಿಲ್ದಾಣಕ್ಕೆ ಶ್ರೀ ಮಧ್ವ ಶಂಕರ ಹೆಸರಿಡಿ : ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀ -Vishwanews24

ಉಡುಪಿ: ಮಂಗಳೂರು ವಿಮಾನ ನಿಲ್ದಾಣಕ್ಕೆ ಶ್ರೀಮಧ್ವ ಶಂಕರ ಹೆಸರಿಡುವಂತೆ ಉಡುಪಿ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಒತ್ತಾಯಿಸಿದ್ದಾರೆ.

ಭಾರತ ವಿಶ್ವ ಗುರುವಾಗಬೇಕೆಂದು ಎಲ್ಲರೂ ಬಯಸುತ್ತಿರುವಾಗ ಭಾರತೀಯ ಮೇರು ದಾರ್ಶನಿಕ, ಜಗದ್ಗುರುಗಳಾದ ಶ್ರೀಮಧ್ವಾಚಾರ್ಯರು ಮತ್ತು ಶ್ರೀಶಂಕರಾಚಾರ್ಯರ ಹೆಸರನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಇಡುವುದು ಅರ್ಥಪೂರ್ಣ, ಅಪೂರ್ವ ಮತ್ತು ಮೌಲಿಕ ಎಂದು ಹೇಳಿದ್ದಾರೆ.

ಅಯೋಧ್ಯೆಯಲ್ಲಿ ಶ್ರೀರಾಮನ ಹೆಸರಿನಲ್ಲಿ ವಿಮಾನ ನಿಲ್ದಾಣ ರೂಪುಗೊಂಡಂತೆ ದಾರ್ಶನಿಕ ಆಚಾರ್ಯರ ನೆಲೆವೀಡಾದ ದಕ್ಷಿಣ ಭಾರತದ ವಿಮಾನ ನಿಲ್ದಾಣಕ್ಕೆ ಶ್ರೀಮಧ್ವ ಶಂಕರ ನಾಮಕರಣ ಭಾರತೀಯ ದಾರ್ಶನಿಕ ಪರಂಪರೆಗೆ ಗೌರವ ಸಲ್ಲಿಸಿದಂತೆ. ಜಗತ್ತಿನಲ್ಲಿಧರ್ಮ ಪ್ರಚಾರಕ್ಕೆ ಪೂರಕ, ಭಾವೈಕ್ಯತೆಗೂ ಇಂಬು ನೀಡಲಿದೆ.

ಆಧ್ಯಾತ್ಮಿಕತೆಯೇ ಭಾರತದ ಮೂಲ ಮತ್ತು ಅಪೂರ್ವ ಸಂಪತ್ತಾಗಿದ್ದು, ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರದಲ್ಲಷ್ಟೇ ಭಾರತ ಭವಿಷ್ಯದಲ್ಲಿ ಜಗತ್ತಿನ ನೇತೃತ್ವ ಪಡೆಯಲು ಉಜ್ವಲ ಮತ್ತು ವಿಪುಲ ಅವಕಾಶವಿದೆ. ಶ್ರೀರಾಮಾನುಜಾಚಾರ್ಯ, ಬಸವಣ್ಣ ಮೊದಲಾದ ಮಹಾ ಧಾರ್ಮಿಕ ನೇತಾರರ ಮೂಲ ಸ್ಥಳಗಳ ಸಮೀಪದಲ್ಲಿರುವ ಹಾಗೂ ದೇಶದ ಉಳಿದ ವಿಮಾನ ನಿಲ್ದಾಣಗಳಿಗೆ ಧಾರ್ಮಿಕ ನೇತಾರರ ನಾಮಕರಣವೇ ಹೆಚ್ಚು ಪ್ರಶಸ್ತ.

ಕೊರೊನಾ ಹಿನ್ನೆಲೆಯಲ್ಲಿ ಜಗತ್ತಿಗೆ ಆಧ್ಯಾತ್ಮಿಕ ಆಂದೋಲನದ ಅಗತ್ಯ ಬಹಳಷ್ಟಿದ್ದು ಈ ಹಿನ್ನೆಲೆಯಲ್ಲಿ ಧಾರ್ಮಿಕ, ಆಧ್ಯಾತ್ಮಿಕ ಚಿಂತನೆ, ಕೆಲಸ ಕಾರ್ಯಗಳಿಗೆ ಸರಕಾರ ಹೆಚ್ಚಿನ ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಶ್ರೀಮಧ್ವ ಶಂಕರರ ಹೆಸರಿಡಲು ಸಂಬಂಧಿತರು ಗಮನಹರಿಸುವಂತೆ ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

30 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

42 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

1 hour ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

1 hour ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

2 hours ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

2 hours ago