Featured

ಮಂಗಳೂರು ವಿಮಾನ ನಿಲ್ದಾಣಕ್ಕೆ ಶ್ರೀ ಮಧ್ವ ಶಂಕರ ಹೆಸರಿಡಿ : ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀ -Vishwanews24

ಮಂಗಳೂರು ವಿಮಾನ ನಿಲ್ದಾಣಕ್ಕೆ ಶ್ರೀ ಮಧ್ವ ಶಂಕರ ಹೆಸರಿಡಿ : ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀ -Vishwanews24

ಉಡುಪಿ: ಮಂಗಳೂರು ವಿಮಾನ ನಿಲ್ದಾಣಕ್ಕೆ ಶ್ರೀಮಧ್ವ ಶಂಕರ ಹೆಸರಿಡುವಂತೆ ಉಡುಪಿ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಒತ್ತಾಯಿಸಿದ್ದಾರೆ.

ಭಾರತ ವಿಶ್ವ ಗುರುವಾಗಬೇಕೆಂದು ಎಲ್ಲರೂ ಬಯಸುತ್ತಿರುವಾಗ ಭಾರತೀಯ ಮೇರು ದಾರ್ಶನಿಕ, ಜಗದ್ಗುರುಗಳಾದ ಶ್ರೀಮಧ್ವಾಚಾರ್ಯರು ಮತ್ತು ಶ್ರೀಶಂಕರಾಚಾರ್ಯರ ಹೆಸರನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಇಡುವುದು ಅರ್ಥಪೂರ್ಣ, ಅಪೂರ್ವ ಮತ್ತು ಮೌಲಿಕ ಎಂದು ಹೇಳಿದ್ದಾರೆ.

ಅಯೋಧ್ಯೆಯಲ್ಲಿ ಶ್ರೀರಾಮನ ಹೆಸರಿನಲ್ಲಿ ವಿಮಾನ ನಿಲ್ದಾಣ ರೂಪುಗೊಂಡಂತೆ ದಾರ್ಶನಿಕ ಆಚಾರ್ಯರ ನೆಲೆವೀಡಾದ ದಕ್ಷಿಣ ಭಾರತದ ವಿಮಾನ ನಿಲ್ದಾಣಕ್ಕೆ ಶ್ರೀಮಧ್ವ ಶಂಕರ ನಾಮಕರಣ ಭಾರತೀಯ ದಾರ್ಶನಿಕ ಪರಂಪರೆಗೆ ಗೌರವ ಸಲ್ಲಿಸಿದಂತೆ. ಜಗತ್ತಿನಲ್ಲಿಧರ್ಮ ಪ್ರಚಾರಕ್ಕೆ ಪೂರಕ, ಭಾವೈಕ್ಯತೆಗೂ ಇಂಬು ನೀಡಲಿದೆ.

ಆಧ್ಯಾತ್ಮಿಕತೆಯೇ ಭಾರತದ ಮೂಲ ಮತ್ತು ಅಪೂರ್ವ ಸಂಪತ್ತಾಗಿದ್ದು, ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರದಲ್ಲಷ್ಟೇ ಭಾರತ ಭವಿಷ್ಯದಲ್ಲಿ ಜಗತ್ತಿನ ನೇತೃತ್ವ ಪಡೆಯಲು ಉಜ್ವಲ ಮತ್ತು ವಿಪುಲ ಅವಕಾಶವಿದೆ. ಶ್ರೀರಾಮಾನುಜಾಚಾರ್ಯ, ಬಸವಣ್ಣ ಮೊದಲಾದ ಮಹಾ ಧಾರ್ಮಿಕ ನೇತಾರರ ಮೂಲ ಸ್ಥಳಗಳ ಸಮೀಪದಲ್ಲಿರುವ ಹಾಗೂ ದೇಶದ ಉಳಿದ ವಿಮಾನ ನಿಲ್ದಾಣಗಳಿಗೆ ಧಾರ್ಮಿಕ ನೇತಾರರ ನಾಮಕರಣವೇ ಹೆಚ್ಚು ಪ್ರಶಸ್ತ.

ಕೊರೊನಾ ಹಿನ್ನೆಲೆಯಲ್ಲಿ ಜಗತ್ತಿಗೆ ಆಧ್ಯಾತ್ಮಿಕ ಆಂದೋಲನದ ಅಗತ್ಯ ಬಹಳಷ್ಟಿದ್ದು ಈ ಹಿನ್ನೆಲೆಯಲ್ಲಿ ಧಾರ್ಮಿಕ, ಆಧ್ಯಾತ್ಮಿಕ ಚಿಂತನೆ, ಕೆಲಸ ಕಾರ್ಯಗಳಿಗೆ ಸರಕಾರ ಹೆಚ್ಚಿನ ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಶ್ರೀಮಧ್ವ ಶಂಕರರ ಹೆಸರಿಡಲು ಸಂಬಂಧಿತರು ಗಮನಹರಿಸುವಂತೆ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago