ಮೂಡುಬಿದಿರೆ: ಕೋಟಿ- ಚೆನ್ನಯರೆಂದರೆ ದೈವಿಕ ಶಕ್ತಿ ಮಾತ್ರವಲ್ಲ. ಅವರು ತುಳುನಾಡಿನ ಸಂಸ್ಕೃತಿಯ ಪ್ರತಿಬಿಂಬ, ತ್ಯಾಗ,-ಬಲಿದಾನದ ಸಂಕೇತ. ತುಳುನಾಡು ಮಾತ್ರವಲ್ಲದೆ ಮಡಿಕೇರಿ, ಕಾಸರಗೋಡಿನಲ್ಲೂ ಗರಡಿಗಳನ್ನು ಸ್ಥಾಪಿಸಿ ಸಾಮರಸ್ಯ ಮೆರೆದಿದ್ದಾರೆ. ಆದ್ದರಿಂದ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ- ಚೆನ್ನಯರ ಹೆಸರಿಡಬೇಕೆಂಬ ಜನಾಭಿಪ್ರಾಯಕ್ಕೆ ನನ್ನ ಬೆಂಬಲ ಇದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ತಿಳಿಸಿದ್ದಾರೆ.
ಈ ವಿಷಯದಲ್ಲಿ ಜನಾಭಿಪ್ರಾಯಕ್ಕೆ ಸ್ಪಂದಿಸಿ ನಾನು ಸೇರಿದಂತೆ ಜಿಲ್ಲೆಯ ಶಾಸಕರು, ಉಸ್ತುವಾರಿ ಸಚಿವರು ಹಾಗೂ ಸಂಸದರು ಸೇರಿ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಅದನ್ನು ಸಚಿವ ಸಂಪುಟಕ್ಕಿಟ್ಟು ಅನುಮೋದನೆ ಪಡೆದ ಬಳಿಕ ಮುಂದಿನ ಕ್ರಮಕ್ಕಾಗಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳಿಸಲಾಗುತ್ತದೆ. ಈ ಎಲ್ಲ ಪ್ರಕ್ರಿಯೆ ಮುಂದುವರಿಯಲು ನಾವು ಸರಕಾರದ ಮೇಲೆ ಒತ್ತಡ ಹೇರಿದ್ದೇವೆ. ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಹೆಸರಿಡಲು ಜಿಲ್ಲೆಯ ಜನರು, ಜಾತಿ-ಮತ ಮರೆತು ಹೋರಾಟ ನಡೆಸಿದಾಗ ಹೆಚ್ಚಿನ ಬೆಂಬಲ ಸಿಗುತ್ತದೆ ಎಂದು ಹೇಳಿದರು
ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…
ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…
ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…
ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…
ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು…
ಮಣಿಪಾಲ: ಯುವತಿಯ ಕೊಲೆಗೆ ಯತ್ನಿಸಿ ಸುಲಿಗೆ ಪ್ರಕರಣ: ಸ್ನೇಹಿತೆಯ ಬಂಧನ ಉಡುಪಿ: ಮಣಿಪಾಲದ ಶಾಂತಿನಗರದ ಬಳಿಯ ರೂಮಿನಲ್ಲಿ ಅಂಕೋಲದ ಯೋಗೀತಾ…