ಬೆಂಗಳೂರು: ತುಳುನಾಡಿನ ಅವಳಿ ವೀರರಾದ ಕೋಟಿ ಚೆನ್ನಯರ ಹೆಸರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವಂತೆ ಸೂಚಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಸಲ್ಲಿಸುವ ಭರವಸೆಯನ್ನು ಕಾನೂನು ಸಚಿವ ಜೆ. ಸಿ. ಮಾಧುಸ್ವಾಮಿ ನೀಡಿದ್ದಾರೆ.
ಈ ವಿಮಾನ ನಿಲ್ದಾಣಕ್ಕೆ ತುಳುನಾಡಿನ ಕಾರಣಿಕ ವೀರರಾದ ಕೋಟಿ ಚೆನ್ನಯರು ಹೆಸರನ್ನು ಇರಿಸುವ ಬೇಡಿಕೆ ಕರಾವಳಿ ಭಾಗದಲ್ಲಿ ಬಹು ಹಿಂದಿನಿಂದಲೇ ಕೇಳಿ ಬರುತ್ತಿತ್ತು. ಈ ವಿಮಾನ ನಿಲ್ದಾಣ ಅಧಾನಿ ಸಂಸ್ಥೆಯ ವ್ಯಾಪ್ತಿಗೆ ಸೇರಿದ ಬಳಿಕ ಈ ನಿಲ್ದಾಣದ ಹೆಸರು ಬದಲಾವಣೆಯ ಕೂಗು ಹೆಚ್ಚಾಗಿದೆ. ಹಾಗೆಯೇ ಕೋಟಿ ಚೆನ್ನಯರ ಹೆಸರು ಸೇರಿದಂತೆ ಇನ್ನೂ ಅನೇಕ ಹೆಸರುಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿತ್ತು.
ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಗಮನವನ್ನು ಸೆಳೆದಿರುವ ಬಿಜೆಪಿ ಶಾಸಕ ಉಮಾನಾಥ ಕೋಟ್ಯಾನ್ ಅವರು, ಈ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ವಿಮಾನ ನಿಲ್ದಾಣ ಎಂದು ಹೆಸರನ್ನಿಡುವಂತೆ ಪ್ರಸ್ತಾಪ ಸಲ್ಲಿಸಿದ್ದಾರೆ. ಅಧಿವೇಶನದ ಶೂನ್ಯ ವೇಳೆಯಲ್ಲಿ ಅವರು ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ. ಕೋಟಿ ಚೆನ್ನಯರ ಹೆಸರನ್ನಿಡುವಂತೆ ಆಗ್ರಹಿಸಿ ಕರಾವಳಿಯ ಕೆಲವೆಡೆ ಸಮಾವೇಶಗಳು ನಡೆಯುತ್ತಿರುವುದನ್ನು ಸರ್ಕಾರದ ಗಮನಕ್ಕೆ ತಂದಿದ್ದಾರೆ.
ಉಮಾನಾಥ ಕೋಟ್ಯಾನ್ ಅವರ ಪ್ರಸ್ತಾಪಕ್ಕೆ ಶಾಸಟ ಹರೀಶ್ ಪೂಂಜ, ವೇದವ್ಯಾಸ ಕಾಮತ್ ಮೊದಲಾದವರು ಸಹಮತ ಸೂಚಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…