Featured

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು: ಶಾಸಕರಿಂದ ಸಿ.ಎಂ. ಗೆ ಮನವಿ -Vishwanews24

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು: ಶಾಸಕರಿಂದ ಸಿ.ಎಂ. ಗೆ ಮನವಿ -Vishwanews24

ಕೇಂದ್ರ ಸರ್ಕಾರ‌ಕ್ಕೆ ಶಿಫಾರಸ್ಸು ಸಲ್ಲಿಸುವ ಭರವಸೆ : ಜೆ. ಸಿ. ಮಾಧುಸ್ವಾಮಿ

ಬೆಂಗಳೂರು: ತುಳುನಾಡಿನ ಅವಳಿ ವೀರರಾದ ಕೋಟಿ ಚೆನ್ನಯರ ಹೆಸರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವಂತೆ ಸೂಚಿಸಿ ಕೇಂದ್ರ ಸರ್ಕಾರ‌ಕ್ಕೆ ಶಿಫಾರಸ್ಸು ಸಲ್ಲಿಸುವ ಭರವಸೆಯನ್ನು ಕಾನೂನು ಸಚಿವ ಜೆ. ಸಿ. ಮಾಧುಸ್ವಾಮಿ ನೀಡಿದ್ದಾರೆ.

ಈ ವಿಮಾನ ನಿಲ್ದಾಣಕ್ಕೆ ತುಳುನಾಡಿನ ಕಾರಣಿಕ ವೀರರಾದ ಕೋಟಿ ಚೆನ್ನಯರು ಹೆಸರನ್ನು ಇರಿಸುವ ಬೇಡಿಕೆ ಕರಾವಳಿ ಭಾಗದಲ್ಲಿ ಬಹು ಹಿಂದಿನಿಂದ‌ಲೇ ಕೇಳಿ ಬರುತ್ತಿತ್ತು. ಈ ವಿಮಾನ ನಿಲ್ದಾಣ ಅಧಾನಿ ಸಂಸ್ಥೆಯ ವ್ಯಾಪ್ತಿಗೆ ಸೇರಿದ ಬಳಿಕ ಈ ನಿಲ್ದಾಣ‌ದ ಹೆಸರು ಬದಲಾವಣೆಯ ಕೂಗು ಹೆಚ್ಚಾಗಿದೆ. ಹಾಗೆಯೇ ಕೋಟಿ ಚೆನ್ನಯರ ಹೆಸರು ಸೇರಿದಂತೆ ಇನ್ನೂ ಅನೇಕ ಹೆಸರುಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಗಮನವನ್ನು ಸೆಳೆದಿರುವ ಬಿಜೆಪಿ ಶಾಸಕ ಉಮಾನಾಥ ಕೋಟ್ಯಾನ್ ಅವರು, ಈ ವಿಮಾನ ನಿಲ್ದಾಣ‌ಕ್ಕೆ ಕೋಟಿ ಚೆನ್ನಯ ವಿಮಾನ ನಿಲ್ದಾಣ ಎಂದು ಹೆಸರನ್ನಿಡುವಂತೆ ಪ್ರಸ್ತಾಪ ಸಲ್ಲಿಸಿದ್ದಾರೆ. ಅಧಿವೇಶನ‌ದ ಶೂನ್ಯ ವೇಳೆಯಲ್ಲಿ ಅವರು ಈ ವಿಚಾರ‌ವನ್ನು ಪ್ರಸ್ತಾಪ ಮಾಡಿದ್ದಾರೆ. ಕೋಟಿ ಚೆನ್ನಯರ ಹೆಸರನ್ನಿಡುವಂತೆ ಆಗ್ರಹಿಸಿ ಕರಾವಳಿ‌ಯ ಕೆಲವೆಡೆ ಸಮಾವೇಶ‌ಗಳು ನಡೆಯುತ್ತಿರುವುದನ್ನು ಸರ್ಕಾರ‌ದ ಗಮನಕ್ಕೆ ತಂದಿದ್ದಾರೆ.

ಉಮಾನಾಥ ಕೋಟ್ಯಾನ್ ಅವರ ಪ್ರಸ್ತಾಪ‌ಕ್ಕೆ ಶಾಸಟ ಹರೀಶ್ ಪೂಂಜ, ವೇದವ್ಯಾಸ ಕಾಮತ್ ಮೊದಲಾದವರು ಸಹಮತ ಸೂಚಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago