Featured

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು: ಶಾಸಕರಿಂದ ಸಿ.ಎಂ. ಗೆ ಮನವಿ -Vishwanews24

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು: ಶಾಸಕರಿಂದ ಸಿ.ಎಂ. ಗೆ ಮನವಿ -Vishwanews24

ಕೇಂದ್ರ ಸರ್ಕಾರ‌ಕ್ಕೆ ಶಿಫಾರಸ್ಸು ಸಲ್ಲಿಸುವ ಭರವಸೆ : ಜೆ. ಸಿ. ಮಾಧುಸ್ವಾಮಿ

ಬೆಂಗಳೂರು: ತುಳುನಾಡಿನ ಅವಳಿ ವೀರರಾದ ಕೋಟಿ ಚೆನ್ನಯರ ಹೆಸರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವಂತೆ ಸೂಚಿಸಿ ಕೇಂದ್ರ ಸರ್ಕಾರ‌ಕ್ಕೆ ಶಿಫಾರಸ್ಸು ಸಲ್ಲಿಸುವ ಭರವಸೆಯನ್ನು ಕಾನೂನು ಸಚಿವ ಜೆ. ಸಿ. ಮಾಧುಸ್ವಾಮಿ ನೀಡಿದ್ದಾರೆ.

ಈ ವಿಮಾನ ನಿಲ್ದಾಣಕ್ಕೆ ತುಳುನಾಡಿನ ಕಾರಣಿಕ ವೀರರಾದ ಕೋಟಿ ಚೆನ್ನಯರು ಹೆಸರನ್ನು ಇರಿಸುವ ಬೇಡಿಕೆ ಕರಾವಳಿ ಭಾಗದಲ್ಲಿ ಬಹು ಹಿಂದಿನಿಂದ‌ಲೇ ಕೇಳಿ ಬರುತ್ತಿತ್ತು. ಈ ವಿಮಾನ ನಿಲ್ದಾಣ ಅಧಾನಿ ಸಂಸ್ಥೆಯ ವ್ಯಾಪ್ತಿಗೆ ಸೇರಿದ ಬಳಿಕ ಈ ನಿಲ್ದಾಣ‌ದ ಹೆಸರು ಬದಲಾವಣೆಯ ಕೂಗು ಹೆಚ್ಚಾಗಿದೆ. ಹಾಗೆಯೇ ಕೋಟಿ ಚೆನ್ನಯರ ಹೆಸರು ಸೇರಿದಂತೆ ಇನ್ನೂ ಅನೇಕ ಹೆಸರುಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಗಮನವನ್ನು ಸೆಳೆದಿರುವ ಬಿಜೆಪಿ ಶಾಸಕ ಉಮಾನಾಥ ಕೋಟ್ಯಾನ್ ಅವರು, ಈ ವಿಮಾನ ನಿಲ್ದಾಣ‌ಕ್ಕೆ ಕೋಟಿ ಚೆನ್ನಯ ವಿಮಾನ ನಿಲ್ದಾಣ ಎಂದು ಹೆಸರನ್ನಿಡುವಂತೆ ಪ್ರಸ್ತಾಪ ಸಲ್ಲಿಸಿದ್ದಾರೆ. ಅಧಿವೇಶನ‌ದ ಶೂನ್ಯ ವೇಳೆಯಲ್ಲಿ ಅವರು ಈ ವಿಚಾರ‌ವನ್ನು ಪ್ರಸ್ತಾಪ ಮಾಡಿದ್ದಾರೆ. ಕೋಟಿ ಚೆನ್ನಯರ ಹೆಸರನ್ನಿಡುವಂತೆ ಆಗ್ರಹಿಸಿ ಕರಾವಳಿ‌ಯ ಕೆಲವೆಡೆ ಸಮಾವೇಶ‌ಗಳು ನಡೆಯುತ್ತಿರುವುದನ್ನು ಸರ್ಕಾರ‌ದ ಗಮನಕ್ಕೆ ತಂದಿದ್ದಾರೆ.

ಉಮಾನಾಥ ಕೋಟ್ಯಾನ್ ಅವರ ಪ್ರಸ್ತಾಪ‌ಕ್ಕೆ ಶಾಸಟ ಹರೀಶ್ ಪೂಂಜ, ವೇದವ್ಯಾಸ ಕಾಮತ್ ಮೊದಲಾದವರು ಸಹಮತ ಸೂಚಿಸಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

7 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

8 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

8 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

9 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

9 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

10 hours ago