ಮಂಗಳೂರು : ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಬೇಕೆಂದು ಆಗ್ರಹಿಸಿ ಬಿಲ್ಲವ ಬ್ರಿಗೇಡ್ ವತಿಯಿಂದ ನಡೆದ ಬೃಹತ್ ಬೈಕ್ ರ್ಯಾಲಿಗೆ ಪೊಲೀಸರು ತಡೆ ಒಡ್ಡಿದ ಘಟನೆ ನಡೆದಿದೆ. ಬೈಕ್ ರ್ಯಾಲಿ ಇಲ್ಲದೇ ಕಾಲ್ನಡಿಗೆಯಲ್ಲೇ ಬಿಲ್ಲವ ಬ್ರಿಗೇಡ್ ಮರವೂರಿನಿಂದ ಕೆಂಜಾರಿನವರೆಗೆ ಘೋಷಣೆ ಕೂಗುತ್ತಾ ಸಾಗಿತು.
ಇದೇ ವೇಳೆ ಕೋಟಿ ಚೆನ್ನಯರ ಹೆಸರಿಡದಿದ್ದರೆ ಹೋರಾಟ ನಿಲ್ಲದು. ತುಳುನಾಡಿನ ಮಹಾಪುರುಷರಾದ ಕೋಟಿ ಚೆನ್ನಯರ ಹೆಸರಿಡಬೇಕು. ರಾಜ್ಯ ಸರ್ಕಾರಕ್ಕೆ ತಲುಪಿಸಿದ ಮನವಿ ಪತ್ರ ಮೂಲೆ ಗುಂಪಾಗಿದೆ. ನಮ್ಮದು ಕೇವಲ ಒಂದು ದಿನದ ಹೋರಾಟ ಅಲ್ಲ. ಗೆಲುವು ಸಿಗುವವರೆಗೆ ನಮ್ಮ ಹೋರಾಟ ನಡೆಯುತ್ತಿರುತ್ತದೆ. ಎಷ್ಟೇ ತಡೆ ಬಂದರೂ ಕೂಡ ನಾವು ಹಿಂಜರಿಯೋದಿಲ್ಲ.ಅದಾನಿ ಏರ್ ಪೋರ್ಟ್ ಕೋಟಿ ಚೆನ್ನಯರ ಏರ್ ಪೋರ್ಟ್ ಎಂದು ಹೆಸರು ಬದಲಾಯಿಸುವವರೆಗೆ ನಮ್ಮ ಹೋರಾಟ ನಿಲ್ಲೋದಿಲ್ಲ ಎಂದು ಸತ್ಯಜಿತ್ ಸುರತ್ಕಲ್ ಹೇಳಿದರು.
ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ…
ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…
ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…
ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…
ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…
ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು…