Featured

ಮಂಗಳೂರು : ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳಂತೆ ವಂಚಿಸಲು ಯತ್ನ – ಮೂವರು ವಶಕ್ಕೆ -Vishwanews24

ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳಂತೆ ಫೋಸು ನೀಡಿಕೊಂಡು ವಂಚಿಸಲು ಯತ್ನಿಸುತ್ತಿದ್ದ ಮೂವರನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಕ್ಷಿಪ್ರ ಕಾರ್ಯಾಚರಣೆ ತಂಡವು (ಕ್ಯೂಆರ್‌ಟಿ) ಡಿ.16ರ ಭಾನುವಾರ ಬಂಧಿಸಿದೆ.

ಬಂಧಿತರನ್ನು ಸ್ಥಳೀಯ ನಿವಾಸಿಗಳಾದ ರಿಯಾಜ್, ಮೊಹಮ್ಮದ್ ಸಾಹೇಬ್ ಕರಬೊ ಮತ್ತು ಖಾಜಿ ಅಫ್ತಾಬ್ ಎಂದು ಗುರುತಿಸಲಾಗಿದೆ. ಮಸ್ಕತ್‌ನಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ ಪ್ರಯಾಣಿಕ ಮೊಹಮ್ಮದ್ ಶಮಾಸ್‌ ಅವರು ವಲಸೆ ಮತ್ತು ಕಸ್ಟಮ್ಸ್ ತಪಾಸಣೆ ಮುಗಿಸಿ ಹೊರಬರುತ್ತಿದ್ದ ವೇಳೆಯಲ್ಲಿ ಈ ಮೂವರು ಆರೋಪಿಗಳು ವಂಚಿಸಲು ಯತ್ನಿಸಿದ್ದರು ಎಂದು ದೂರಲಾಗಿದೆ.

ಪ್ರಯಾಣಿಕ ಮೊಹಮ್ಮದ್ ಶಮಾಸ್‌ ಟ್ಯಾಕ್ಸಿಗಾಗಿ ಕಾಯುತ್ತಿದ್ದ ವೇಳೆ ಅಲ್ಲಿಗೆ ಬಂದ ಮೂವರು ತಾವು ಕಸ್ಟಮ್ಸ್ ಅಧಿಕಾರಿಗಳು, ಎಂದು ಪರಿಚಯಿಸಿ ಪಾಸ್‌ಪೋರ್ಟ್ ಅನ್ನು ಬಲವಂತ ಕಸಿದುಕೊಂಡ ಈ ಮೂವರು, ವಿಚಾರಣೆಗಾಗಿ ತಮ್ಮ ಜೊತೆ ಬರುವಂತೆ ಎಳೆದೊಯ್ದಿದ್ದಾರೆ. ತಕ್ಷಣವೇ ಅನುಮಾನ ಬಂದ ಶಮಾಸ್ ಭದ್ರತಾ ಸಿಬ್ಬಂದಿ ಬಳಿ ಓಡಿ ಹೋಗಿ ಅವರ ಗಮನಕ್ಕೆ ತಂದಿದ್ದಾರೆ. ಆಗ ಕರ್ತವ್ಯ ನಿರತ ಪೊಲೀಸರು ಈ ಮೂವರನ್ನು ಬೆನ್ನಟ್ಟಿ ಹಿಡಿದು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ವೇಳೆ ಮೂವರು, ಮಹಮ್ಮದ್ ಶಮಾಸ್ ಚಿನ್ನ ಕಳ್ಳಸಾಗಾಟ ಮಾಡುತ್ತಿದ್ದು ತಾವು ಆತನಿಂದ ಚಿನ್ನ ಪಡೆದುಕೊಳ್ಳಲು ಬಂದವರು ಎಂದು ತಿಳಿಸಿದ್ದ ಈ ಹಿನ್ನಲೆಯಲ್ಲಿ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲು ಶಮಾಸ್ ಸಹಿತ ನಾಲ್ವರನ್ನು ಪೊಲೀಸರು ವಶಪಡಿಸಿಕೊಂಡಿದ್ದು ಆ ಬಳಿಕ ಬಜ್ಪೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

2 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

2 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

2 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

3 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

4 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

4 hours ago