ಮಂಗಳೂರು, : ಇಂಗ್ಲೆಂಡ್ ರಾಷ್ಟ್ರದಲ್ಲಿ ಕೋವಿಡ್-19 ರೋಗದ ಹೊಸ ತಳಿಯ ವೈರಸ್ ಪತ್ತೆಯಾಗಿದ್ದು, ಇದರ ಹರಡುವಿಕೆಯನ್ನು ತಡೆಯಲು ಇಂಗ್ಲೆಂಡ್ನಿಂದ ಭಾರತಕ್ಕೆ ಬರುವ ಎಲ್ಲಾ ಅಂತಾರಾಷ್ಟ್ರೀಯ ವಿಮಾನವನ್ನು ಈಗಾಗಲೇ ರದ್ದುಪಡಿಸಲಾಗಿದೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬೆಂಗಳೂರು, ಮಹಾರಾಷ್ಟ್ರ, ಹೈದರಬಾದ್, ಮುಂಬೈ, ಚೆನ್ನೈ, ಕೇರಳ ರಾಜ್ಯದಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ಮೂಲಕ ದ.ಕ ಜಿಲ್ಲೆಗೆ ಡಿಸೆಂಬರ್ 7 ರಿಂದ ಆಗಮಿಸಿರುವ ಎಲ್ಲಾ ಪ್ರಯಾಣಿಕರ ಪಟ್ಟಿಯನ್ನು ತಯಾರಿಸಿ, ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಲಾಗುವುದು.
ಜಿಲ್ಲೆಗೆ ಆಗಮಿಸಿರುವ ಪ್ರಯಾಣಿಕರು ತಮ್ಮ ವಿವರಗಳನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇಲ್ಲಿಗೆ ಸ್ವಯಂ ಪ್ರೇರಿತವಾಗಿ ಬಂದು, ಕಡ್ಡಾಯವಾಗಿ ಆರ್.ಟಿ.-ಪಿ.ಸಿ.ಆರ್. ಪರೀಕ್ಷೆಗೆ ಒಳಪಡಿಸಬೇಕು.
ಸಾರ್ವಜನಿಕರು ತಮ್ಮ ವ್ಯಾಪ್ತಿಯ ವೈದ್ಯಾಧಿಕಾರಿಗಳು, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ವಿದೇಶದಿಂದ ಆಗಮಿಸಿರುವ ವ್ಯಕ್ತಿಗಳು ಇದ್ದಲ್ಲಿ ತಕ್ಷಣ ಇಲಾಖೆಯ ಗಮನಕ್ಕೆ ತರಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (9449843050), ನೋಡಲ್ ಅಧಿಕಾರಿ ಕೋವಿಡ್-19(9972343984), ಜಿಲ್ಲಾ ಸರ್ವೇಕ್ಷಣಾಧಿಕಾರಿ (9448887706), ಹಾಗೂ ತಾಲೂಕು ಆರೋಗ್ಯಾಧಿಕಾರಿಗಳಾದ ಮಂಗಳೂರು (9448151928), ಬಂಟ್ವಾಳ (9845838677), ಬೆಳ್ತಂಗಡಿ (9845967576), ಪುತ್ತೂರು (9448445853), ಸುಳ್ಯ(9449662224) ಅಧಿಕಾರಿಗಳನ್ನು ಸಂರ್ಪಕಿಸಬಹುದು ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…