Featured

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಟ್ರಾಲಿ ಬ್ಯಾಗ್ ಚಕ್ರದಲ್ಲಿ ಅಕ್ರಮವಾಗಿ ತರುತ್ತಿದ್ದ 19 ಲಕ್ಷ ರೂ ಮೌಲ್ಯದ ಚಿನ್ನ ವಶ -Vishwanews24

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಟ್ರಾಲಿ ಬ್ಯಾಗ್ ಚಕ್ರದಲ್ಲಿ ಅಕ್ರಮವಾಗಿ ತರುತ್ತಿದ್ದ 19 ಲಕ್ಷ ರೂ ಮೌಲ್ಯದ ಚಿನ್ನ ವಶ -Vishwanews24

ಮಂಗಳೂರು: ಆಟಿಕೆ ಹಾಗೂ ಟ್ರಾಲಿ ಬ್ಯಾಗ್ ಚಕ್ರದೊಳಗೆ ಅಡಗಿಸಿ ಚಿನ್ನ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು, ಒಬ್ಬನನ್ನು ಬಂಧಿಸಿ 19,01,460 ರೂ. ಮೌಲ್ಯದ ಚಿನ್ನವನ್ನು ವಶ ಪಡಿಸಿದ್ದಾರೆ.

ಕಾಸರಗೋಡಿನ ಶೇಕ್ ಹನೀಫ್ (26) ಬಂಧಿತನಾಗಿದ್ದು, ಈತ ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬಂದಿಳಿದಿದ್ದ. ಕಸ್ಟಮ್ಸ್ ಅಧಿಕಾರಿಗಳು ಈತನನ್ನು ತಪಾಸಣೆ ನಡೆಸಿದಾಗ ಈತ ಟ್ರಾಲಿ ಬ್ಯಾಗ್​ನ ಚಕ್ರದಲ್ಲಿ ಮತ್ತು ವ್ಯಾಕ್ಯೂಮ್ ಕ್ಲೀನರ್ ಆಟಿಕೆಯ ಮೋಟಾರ್ ಪ್ಲೇಟ್​ನಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಪತ್ತೆಯಾಗಿದೆ.

ಕೊಕೆನ್‌ ಸಾಗಾಟ : ಬಿಜೆಪಿ ಯುವ ಮೋರ್ಚಾ ನಾಯಕಿ ಪಮೇಲಾ ಗೋಸ್ವಾಮಿ ಬಂಧನ -Vishwanews24

ಈ ಸಂದರ್ಭ ಕಸ್ಟಮ್ಸ್ ಅಧಿಕಾರಿಗಳು ಆರೋಪಿಯಿಂದ 402 ಗ್ರಾಂ‌ ತೂಕದ 19,01,460 ಮೌಲ್ಯದ ಚಿನ್ನ ವಶಪಡಿಸಿಕೊಂಡು, ಬಂಧಿಸಿದ್ದಾರೆ.ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.

ಕಸ್ಟಮ್ಸ್ ತಂಡದ ನೇತೃತ್ವವನ್ನು ಉಪ ಆಯುಕ್ತ ಡಾ.ಕಪಿಲ್ ಗಡೆ ಐಆರ್‌ಎಸ್ ವಹಿಸಿದ್ದರು, ನಾಗೇಶ್ ಕುಮಾರ್, ಭೂಮ್ಕರ್, ವಿರಾಗ್ ಶುಕ್ಲಾ ಹಾಗೂ ಇತರರು ಸಕ್ರಿಯ ಪಾತ್ರ ವಹಿಸಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

9 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

10 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

10 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

10 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

10 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

10 hours ago