ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ ಸೃಷ್ಟಿಸಿದ್ದ ಯುವಕ ಮತ್ತು ಯುವತಿಯ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅವರಿಬ್ಬರಿಗೆ ವಿಮಾನಯಾನಕ್ಕೆ ನಿಷೇಧ ಹೇರುವ ಸಾಧ್ಯತೆ ಇದೆ ಎನ್ನಲಾಗಿದೆ.
ಇಂಡಿಗೋ ವಿಮಾನಯಾನ ಸಂಸ್ಥೆಯ ಮ್ಯಾನೇಜರ್ ನೀಡಿರುವ ದೂರಿನಂತೆ ದಿಪಯಾನ್ ಮಾಜಿ (23) ಮತ್ತು ಸಿಮ್ರಾನ್ ಟಾಮ್ (23) ವಿರುದ್ಧ ಭಾರತೀಯ ದಂಡ ಸಂಹಿತೆ 505 (1)(ಬಿ) ಮತ್ತು (ಸಿ)ಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಯುವತಿವಿಮಾನದೊಳಗಿದ್ದ ತನ್ನ ಗೆಳೆಯ ದಿಪಯಾನ್ ಮಾಜಿ ಎನ್ನುವಾತನಿಗೆ ಕಳುಹಿಸಿದ್ದ ವಾಟ್ಸ್ ಆಯಪ್ ಸಂದೇಶದಲ್ಲಿ ‘ಬಾಂಬರ್’ ಎನ್ನುವ ಶಬ್ದವನ್ನು ಉಲ್ಲೇಖೀಸಿದ್ದು, ನಿರ್ದಿಷ್ಟ ಸಮುದಾಯದ ಬಗ್ಗೆಯೂ ಚಾಟ್ ಮಾಡಿದ್ದರು ಎಂದು ಮ್ಯಾನೇಜರ್ ದೂರಿನಲ್ಲಿ ತಿಳಿಸಿದ್ದಾರೆ.
ಇನ್ನು ಆತಂಕ ಮತ್ತು ಗೊಂದಲ ಸೃಷ್ಟಿಸಿ ವಿಮಾನ ಪ್ರಯಾಣ ಮತ್ತು ಪ್ರಯಾಣಿಕರಿಗೆ ತೊಂದರೆ ಉಂಟು ಮಾಡಿದ ಹಿನ್ನೆಲೆಯಲ್ಲಿ ಯುವತಿ ಮತ್ತು ಯುವಕನಿಗೆ ವಿಮಾನಯಾನಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು ನಿಷೇಧ ಹೇರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…