ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ ಸೃಷ್ಟಿಸಿದ್ದ ಯುವಕ ಮತ್ತು ಯುವತಿಯ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅವರಿಬ್ಬರಿಗೆ ವಿಮಾನಯಾನಕ್ಕೆ ನಿಷೇಧ ಹೇರುವ ಸಾಧ್ಯತೆ ಇದೆ ಎನ್ನಲಾಗಿದೆ.
ಇಂಡಿಗೋ ವಿಮಾನಯಾನ ಸಂಸ್ಥೆಯ ಮ್ಯಾನೇಜರ್ ನೀಡಿರುವ ದೂರಿನಂತೆ ದಿಪಯಾನ್ ಮಾಜಿ (23) ಮತ್ತು ಸಿಮ್ರಾನ್ ಟಾಮ್ (23) ವಿರುದ್ಧ ಭಾರತೀಯ ದಂಡ ಸಂಹಿತೆ 505 (1)(ಬಿ) ಮತ್ತು (ಸಿ)ಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಯುವತಿವಿಮಾನದೊಳಗಿದ್ದ ತನ್ನ ಗೆಳೆಯ ದಿಪಯಾನ್ ಮಾಜಿ ಎನ್ನುವಾತನಿಗೆ ಕಳುಹಿಸಿದ್ದ ವಾಟ್ಸ್ ಆಯಪ್ ಸಂದೇಶದಲ್ಲಿ ‘ಬಾಂಬರ್’ ಎನ್ನುವ ಶಬ್ದವನ್ನು ಉಲ್ಲೇಖೀಸಿದ್ದು, ನಿರ್ದಿಷ್ಟ ಸಮುದಾಯದ ಬಗ್ಗೆಯೂ ಚಾಟ್ ಮಾಡಿದ್ದರು ಎಂದು ಮ್ಯಾನೇಜರ್ ದೂರಿನಲ್ಲಿ ತಿಳಿಸಿದ್ದಾರೆ.
ಇನ್ನು ಆತಂಕ ಮತ್ತು ಗೊಂದಲ ಸೃಷ್ಟಿಸಿ ವಿಮಾನ ಪ್ರಯಾಣ ಮತ್ತು ಪ್ರಯಾಣಿಕರಿಗೆ ತೊಂದರೆ ಉಂಟು ಮಾಡಿದ ಹಿನ್ನೆಲೆಯಲ್ಲಿ ಯುವತಿ ಮತ್ತು ಯುವಕನಿಗೆ ವಿಮಾನಯಾನಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು ನಿಷೇಧ ಹೇರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…