ಮಂಗಳೂರು: ದೇಶದ ವಿಮಾನ ನಿಲ್ದಾಣಗಳಲ್ಲಿ ನಡೆಸಲಾದ ಸ್ವಚ್ಛತಾ ಸಮೀಕ್ಷೆಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದೇಶದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ.
ಕೇರಳದ ತಿರುವನಂತಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ನವದೆಹಲಿಯಲ್ಲಿ ಭಾನುವಾರ ನಡೆದ ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ(ಎಎಐ) 23ನೇ ವಾರ್ಷಿಕ ಸಮಾರಂಭದಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ದೇಶಕ ವಿವಿ ರಾವ್ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
ದೇಶದ 53 ವಿಮಾನ ನಿಲ್ದಾಣಗಳಲ್ಲಿ ಸಮೀಕ್ಷೆ ನಡೆಸಿ ಎಎಐ ಮಂಗಳೂರು ವಿಮಾನ ನಿಲ್ದಾಣವನ್ನು ದೇಶದ ಅತ್ಯಂತ ಸ್ವಚ್ಛ ನಿಲ್ದಾಣ ಎಂದು ಗುರುತಿಸಿ ಪ್ರಶಸ್ತಿ ನೀಡಿದೆ.
ದೇಶದ್ಯಾಂತ ಸಮೀಕ್ಷೆ ನಡೆಸಿದ ಎಎಐ ಮಂಡಳಿಯ ಅಧಿಕಾರಿಗಳು ವಿಮಾನ ನಿಲ್ದಾಣದ ಟರ್ಮಿನಲ್, ಪಾರ್ಕಿಂಗ್ ಪ್ರದೇಶ, ಶೌಚಾಲಯ, ವಾಣಿಜ್ಯ ಮಳಿಗೆಗಳು ಹಾಗೂ ನಿಲ್ದಾಣದ ರಸ್ತೆ ಸೇರಿದಂತೆ ಪ್ರಯಾಣಿಕರ ಕೊಠಡಿಗಳ ಸ್ವಚ್ಛತೆಯ ಬಗ್ಗೆ ಸಮೀಕ್ಷೆ ನಡೆಸಿದ್ದರು.
ಮಂಗಳೂರು ವಿಮಾನ ನಿಲ್ದಾಣ ಶುಚಿತ್ವದ ಜವಾಬ್ದಾರಿಯನ್ನು ದುರ್ಗಾ ಫೆಸಿಲಿಟಿ ಮ್ಯಾನೇಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ಸೇವಾ ಸಂಸ್ಥೆಗೆ ವಹಿಸಲಾಗಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…