ಮಂಗಳೂರು: ದೇಶದ ವಿಮಾನ ನಿಲ್ದಾಣಗಳಲ್ಲಿ ನಡೆಸಲಾದ ಸ್ವಚ್ಛತಾ ಸಮೀಕ್ಷೆಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದೇಶದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ.
ಕೇರಳದ ತಿರುವನಂತಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ನವದೆಹಲಿಯಲ್ಲಿ ಭಾನುವಾರ ನಡೆದ ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ(ಎಎಐ) 23ನೇ ವಾರ್ಷಿಕ ಸಮಾರಂಭದಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ದೇಶಕ ವಿವಿ ರಾವ್ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
ದೇಶದ 53 ವಿಮಾನ ನಿಲ್ದಾಣಗಳಲ್ಲಿ ಸಮೀಕ್ಷೆ ನಡೆಸಿ ಎಎಐ ಮಂಗಳೂರು ವಿಮಾನ ನಿಲ್ದಾಣವನ್ನು ದೇಶದ ಅತ್ಯಂತ ಸ್ವಚ್ಛ ನಿಲ್ದಾಣ ಎಂದು ಗುರುತಿಸಿ ಪ್ರಶಸ್ತಿ ನೀಡಿದೆ.
ದೇಶದ್ಯಾಂತ ಸಮೀಕ್ಷೆ ನಡೆಸಿದ ಎಎಐ ಮಂಡಳಿಯ ಅಧಿಕಾರಿಗಳು ವಿಮಾನ ನಿಲ್ದಾಣದ ಟರ್ಮಿನಲ್, ಪಾರ್ಕಿಂಗ್ ಪ್ರದೇಶ, ಶೌಚಾಲಯ, ವಾಣಿಜ್ಯ ಮಳಿಗೆಗಳು ಹಾಗೂ ನಿಲ್ದಾಣದ ರಸ್ತೆ ಸೇರಿದಂತೆ ಪ್ರಯಾಣಿಕರ ಕೊಠಡಿಗಳ ಸ್ವಚ್ಛತೆಯ ಬಗ್ಗೆ ಸಮೀಕ್ಷೆ ನಡೆಸಿದ್ದರು.
ಮಂಗಳೂರು ವಿಮಾನ ನಿಲ್ದಾಣ ಶುಚಿತ್ವದ ಜವಾಬ್ದಾರಿಯನ್ನು ದುರ್ಗಾ ಫೆಸಿಲಿಟಿ ಮ್ಯಾನೇಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ಸೇವಾ ಸಂಸ್ಥೆಗೆ ವಹಿಸಲಾಗಿದೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…