ಮಂಗಳೂರು: ಬಿಲ್ಲವ, ಈಡಿಗ, ನಾಮಧಾರಿ ಸಮುದಾಯಗಳ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಹಮ್ಮಿಕೊಂಡಿರುವ 41 ದಿನಗಳ ಪಾದಯಾತ್ರೆ ನಡೆದೇ ನಡೆಯುತ್ತದೆ ಎಂದು ಕರದಾಳು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ಸ್ಪಷ್ಟಪಡಿಸಿದರು.
ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶುಕ್ರವಾರ (ಜ.6) ಬೆಳಿಗ್ಗೆ 10.30 ಗಂಟೆಗೆ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಸಭಾ ಕಾರ್ಯಕ್ರಮ ನಡೆದು, ಮಧ್ಯಾಹ್ನ 12.30ಕ್ಕೆ ಪಾದಯಾತ್ರೆ ಆರಂಭವಾಗಲಿದೆ. ಸಮುದಾಯದ ಮುಖಂಡ ಬಿ. ಜನಾರ್ದನ ಪೂಜಾರಿ, ತೆಲಂಗಾಣದ ಸಚಿವ ಶ್ರೀನಿವಾಸ ಗೌಡ್ ಚಾಲನೆ ನೀಡಲಿದ್ದಾರೆ. ಅಲ್ಲಿಂದ 13 ಕಿ.ಮೀ ಪಾದಯಾತ್ರೆ ನಡೆಸಿ, ಕುಳಾಯಿ ಬಿಲ್ಲವ ಸಂಘದಲ್ಲಿ ಸಂಜೆ ವಸತಿ ಮಾಡಿ, ಅಲ್ಲಿಂದ ಹೆಜಮಾಡಿ ಮಾರ್ಗವಾಗಿ ಒಟ್ಟು 658 ಕಿ.ಮೀ ಪಾದಯಾತ್ರೆ ನಡೆಯಲಿದೆ. ಕುದ್ರೋಳಿ ಕ್ಷೇತ್ರದಲ್ಲಿ 10ಸಾವಿರ ಜನರು ಸೇರುವ ನಿರೀಕ್ಷೆ ಇದೆ’ ಎಂದರು.
ರಾಯಚೂರು, ಬೀದರ್, ಕಲಬುರಗಿ ಭಾಗಗಳಿಂದ 160ಕ್ಕೂ ಹೆಚ್ಚು ವಾಹನಗಳಲ್ಲಿ ಮಂಗಳೂರಿಗೆ ಬಂದು ಪಾದಯಾತ್ರೆಯಲ್ಲಿ ಭಾಗಿಯಾಗುತ್ತಾರೆ. ನಾರಾಯಣಗುರು ಅಭಿವೃದ್ಧಿ ನಿಗಮದ ಬೇಡಿಕೆ ಈಡೇರಿಕೆಗಾಗಿ ಮಾತ್ರ ಪಾದಯಾತ್ರೆ ನಡೆಸುತ್ತಿಲ್ಲ, 10 ವಿವಿಧ ಬೇಡಿಕೆಗಳ ಈಡೇರಿಸುವ ಸಂಬಂಧ ಸರ್ಕಾರದ ಗಮನ ಸೆಳೆಯಲಾಗುತ್ತದೆ. ಸಮಾಜದ ಜಾಗೃತಿಗಾಗಿ ಪಾದಯಾತ್ರೆ ನಡೆಯಲಿದೆ. ಲಂಬಾಣಿ, ಕುಂಬಾರ, ಮಡಿವಾಳ ಸೇರಿದಂತೆ ಆರು ಸಮುದಾಯಗಳ ಸ್ವಾಮೀಜಿಗಳು ನಮ್ಮ ಜೊತೆ ಸೇರಲಿದ್ದಾರೆ. ಇದು ಯಾವುದೇ ಪಕ್ಷದ ವಿರುದ್ಧ ನಡೆಯುವ ಪಾದಯಾತ್ರೆ ಅಲ್ಲ. ಅಂದಾಜು ₹ 1.5 ಕೋಟಿ ಖರ್ಚಾಗಲಿದ್ದು, ಯಾವುದೇ ರಾಜಕೀಯ ನಾಯಕರು, ಪಕ್ಷಗಳಿಂದ ಪಾದಯಾತ್ರೆಗೆ ಹಣ ಪಡೆದಿಲ್ಲ ಎಂದು ತಿಳಿಸಿದರು.
ಯಾವುದೇ ರಾಜಕೀಯ ಉದ್ದೇಶ, ಹುದ್ದೆಗಾಗಿ ಪಾದಯಾತ್ರೆ ನಡೆಸುತ್ತಿಲ್ಲ. ಸಾಕಷ್ಟು ಒತ್ತಡ, ಬೆದರಿಕೆಗಳು ಬಂದಿದ್ದು, ಅದಕ್ಕೆ ಬೆದರುವುದಿಲ್ಲ. ಸಮುದಾಯದ ಕಟ್ಟಕಡೆಯ ಜನರಿಗೆ ನ್ಯಾಯ ಸಿಗಬೇಕು ಎಂಬುದು ಪಾದಯಾತ್ರೆಯ ಉದ್ದೇಶ ಎಂದು ವಿವರಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…