ಮಂಗಳೂರು: ಬಿಲ್ಲವ, ಈಡಿಗ, ನಾಮಧಾರಿ ಸಮುದಾಯಗಳ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಹಮ್ಮಿಕೊಂಡಿರುವ 41 ದಿನಗಳ ಪಾದಯಾತ್ರೆ ನಡೆದೇ ನಡೆಯುತ್ತದೆ ಎಂದು ಕರದಾಳು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ಸ್ಪಷ್ಟಪಡಿಸಿದರು.
ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶುಕ್ರವಾರ (ಜ.6) ಬೆಳಿಗ್ಗೆ 10.30 ಗಂಟೆಗೆ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಸಭಾ ಕಾರ್ಯಕ್ರಮ ನಡೆದು, ಮಧ್ಯಾಹ್ನ 12.30ಕ್ಕೆ ಪಾದಯಾತ್ರೆ ಆರಂಭವಾಗಲಿದೆ. ಸಮುದಾಯದ ಮುಖಂಡ ಬಿ. ಜನಾರ್ದನ ಪೂಜಾರಿ, ತೆಲಂಗಾಣದ ಸಚಿವ ಶ್ರೀನಿವಾಸ ಗೌಡ್ ಚಾಲನೆ ನೀಡಲಿದ್ದಾರೆ. ಅಲ್ಲಿಂದ 13 ಕಿ.ಮೀ ಪಾದಯಾತ್ರೆ ನಡೆಸಿ, ಕುಳಾಯಿ ಬಿಲ್ಲವ ಸಂಘದಲ್ಲಿ ಸಂಜೆ ವಸತಿ ಮಾಡಿ, ಅಲ್ಲಿಂದ ಹೆಜಮಾಡಿ ಮಾರ್ಗವಾಗಿ ಒಟ್ಟು 658 ಕಿ.ಮೀ ಪಾದಯಾತ್ರೆ ನಡೆಯಲಿದೆ. ಕುದ್ರೋಳಿ ಕ್ಷೇತ್ರದಲ್ಲಿ 10ಸಾವಿರ ಜನರು ಸೇರುವ ನಿರೀಕ್ಷೆ ಇದೆ’ ಎಂದರು.
ರಾಯಚೂರು, ಬೀದರ್, ಕಲಬುರಗಿ ಭಾಗಗಳಿಂದ 160ಕ್ಕೂ ಹೆಚ್ಚು ವಾಹನಗಳಲ್ಲಿ ಮಂಗಳೂರಿಗೆ ಬಂದು ಪಾದಯಾತ್ರೆಯಲ್ಲಿ ಭಾಗಿಯಾಗುತ್ತಾರೆ. ನಾರಾಯಣಗುರು ಅಭಿವೃದ್ಧಿ ನಿಗಮದ ಬೇಡಿಕೆ ಈಡೇರಿಕೆಗಾಗಿ ಮಾತ್ರ ಪಾದಯಾತ್ರೆ ನಡೆಸುತ್ತಿಲ್ಲ, 10 ವಿವಿಧ ಬೇಡಿಕೆಗಳ ಈಡೇರಿಸುವ ಸಂಬಂಧ ಸರ್ಕಾರದ ಗಮನ ಸೆಳೆಯಲಾಗುತ್ತದೆ. ಸಮಾಜದ ಜಾಗೃತಿಗಾಗಿ ಪಾದಯಾತ್ರೆ ನಡೆಯಲಿದೆ. ಲಂಬಾಣಿ, ಕುಂಬಾರ, ಮಡಿವಾಳ ಸೇರಿದಂತೆ ಆರು ಸಮುದಾಯಗಳ ಸ್ವಾಮೀಜಿಗಳು ನಮ್ಮ ಜೊತೆ ಸೇರಲಿದ್ದಾರೆ. ಇದು ಯಾವುದೇ ಪಕ್ಷದ ವಿರುದ್ಧ ನಡೆಯುವ ಪಾದಯಾತ್ರೆ ಅಲ್ಲ. ಅಂದಾಜು ₹ 1.5 ಕೋಟಿ ಖರ್ಚಾಗಲಿದ್ದು, ಯಾವುದೇ ರಾಜಕೀಯ ನಾಯಕರು, ಪಕ್ಷಗಳಿಂದ ಪಾದಯಾತ್ರೆಗೆ ಹಣ ಪಡೆದಿಲ್ಲ ಎಂದು ತಿಳಿಸಿದರು.
ಯಾವುದೇ ರಾಜಕೀಯ ಉದ್ದೇಶ, ಹುದ್ದೆಗಾಗಿ ಪಾದಯಾತ್ರೆ ನಡೆಸುತ್ತಿಲ್ಲ. ಸಾಕಷ್ಟು ಒತ್ತಡ, ಬೆದರಿಕೆಗಳು ಬಂದಿದ್ದು, ಅದಕ್ಕೆ ಬೆದರುವುದಿಲ್ಲ. ಸಮುದಾಯದ ಕಟ್ಟಕಡೆಯ ಜನರಿಗೆ ನ್ಯಾಯ ಸಿಗಬೇಕು ಎಂಬುದು ಪಾದಯಾತ್ರೆಯ ಉದ್ದೇಶ ಎಂದು ವಿವರಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…