ಮಂಗಳೂರು: ತಿಂಗಳ ರಜೆ ಹಾಗೂ ಹಬ್ಬಗಳ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಉಂಟಾಗುವ ಪ್ರಯಾಣಿಕರ ವಿಪರೀತ ದಟ್ಟಣೆಯನ್ನು ಕಡಿಮೆ ಮಾಡಲು ರೈಲ್ವೆ ಇಲಾಖೆಯು ಮಂಗಳೂರು ಮಾರ್ಗವಾಗಿ ಸಂಚರಿಸುವ ಪ್ರಮುಖ ರೈಲುಗಳಿಗೆ ಹೆಚ್ಚುವರಿ ಸ್ಲೀಪರ್ ಕ್ಲಾಸ್ ಬೋಗಿಗಳನ್ನು ಅಳವಡಿಸಲು ನಿರ್ಧರಿಸಿದೆ.
ಹೆಚ್ಚುವರಿ ಬೋಗಿ ಅಳವಡಿಸಲಾದ ರೈಲುಗಳ ವಿವರ ಇಂತಿವೆ.
ಎ.10 ಮತ್ತು 11 ರಂದು ಚೆನ್ನೈನಿಂದ ಹೊರಡುವ ಚೆನ್ನೈ ಎಗ್ಮೋರ್ – ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16159 ) ರೈಲಿಗೆ ಒಂದು ಹೆಚ್ಚುವರಿ ಸ್ಲೀಪರ್ ಬೋಗಿ ಇರಲಿದೆ.
ಇದನ್ನೂ ಓದಿ :
ಎ. 12 ಮತ್ತು 13 ರಂದು ಮಂಗಳೂರು ಸೆಂಟ್ರಲ್ನಿಂದ ಹೊರಡುವ ಮಂಗಳೂರು ಸೆಂಟ್ರಲ್ – ಚೆನ್ನೈ ಎಗ್ಮೋರ್ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16160 ) ರೈಲಿಗೆ ಒಂದು ಹೆಚ್ಚುವರಿ ಸ್ಲೀಪರ್ ಬೋಗಿ ಅಳವಡಿಸಲಾಗುವುದು.
ಎ. 10, 11, 12, 14 ಮತ್ತು 15 ರಂದು ಮಂಗಳೂರು ಸೆಂಟ್ರಲ್ನಿಂದ ಹೊರಡುವ ಮಾವೇಲಿ ಎಕ್ಸ್ಪ್ರೆಸ್ ಮಂಗಳೂರು ಸೆಂಟ್ರಲ್ – ತಿರುವನಂತಪುರಂ ಸೆಂಟ್ರಲ್ ರೈಲು (ರೈಲು ಸಂಖ್ಯೆ 16603 )ಒಂದು ಹೆಚ್ಚುವರಿ ಸ್ಲೀಪರ್ ಬೋಗಿ ಸೇರಿಸಲಾಗುವುದು.
ಎ. 11, 12, 13, 15 ಮತ್ತು 16 ರಂದು ತಿರುವನಂತಪುರಂ ಸೆಂಟ್ರಲ್ ಹೊರಡುವ ತಿರುವನಂತಪುರ ಸೆಂಟ್ರಲ್ – ಮಂಗಳೂರು ಸೆಂಟ್ರಲ್ ( ರೈಲು ಸಂಖ್ಯೆ 16604 ) ಮಾವೇಲಿ ಎಕ್ಸ್ಪ್ರೆಸ್ ರೈಲಿಗೆ ಒಂದು ಹೆಚ್ಚುವರಿ ಸ್ಲೀಪರ್ ಬೋಗಿ ಇರಲಿದೆ.
ಇದನ್ನೂ ಓದಿ :
ಎ.8ರಿಂದ 15 ರವರೆಗೆ ಮಂಗಳೂರು ಸೆಂಟ್ರಲ್ನಿಂದ ಹೊರಡುವ (ರೈಲು ಸಂಖ್ಯೆ 16630 )ಮಂಗಳೂರು ಸೆಂಟ್ರಲ್ – ತಿರುವನಂತಪುರಂ ಸೆಂಟ್ರಲ್ ಮಲಬಾರ್ ಎಕ್ಸ್ಪ್ರೆಸ್ ರೈಲಿಗೆ ಒಂದು ಹೆಚ್ಚುವರಿ ಸ್ಲೀಪರ್ ಬೋಗಿ ಅಳವಡಿಸಲಾಗುವುದು.
ಎ.9 ರಿಂದ 16 ರವರೆಗೆ ತಿರುವನಂತಪುರಂನಿಂದ ಹೊರಡುವ ತಿರುವನಂತಪುರಂ – ಮಂಗಳೂರು ಸೆಂಟ್ರಲ್ (ಸಂಖ್ಯೆ 16629 ) ಮಲಬಾರ್ ಎಕ್ಸ್ಪ್ರೆಸ್ ರೈಲಿಗೆ ಒಂದು ಹೆಚ್ಚುವರಿ ಸ್ಲೀಪರ್ ಬೋಗಿ ಅಳವಡಿಸಲು ನಿರ್ಧರಿಸ ಲಾಗಿದೆ ಎಂದು ರೈಲ್ವೆ ಇಲಾಖೆಯ ಪ್ರಕಟನೆ ತಿಳಿಸಿದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…