ಪ್ರತಿಭಾ ದಿನಾಚರಣೆ ಹಾಗೂ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶ್ರೀಕಾಂತ್ ಶೆಟ್ಟಿ ಕಾರ್ಕಳ ..
ಶ್ರೀಕಾಂತ್ ಶೆಟ್ಟಿ ಅತಿಥಿಯಾದರೆ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುದಾಗಿ NSUI ಎಚ್ಚರಿಕೆ..
ಕಾರ್ಯಕ್ರಮವನ್ನು ಮುಂದೂಡಿದ ಮಂಗಳೂರು ವಿವಿ ಕಾಲೇಜು..
ಮಂಗಳೂರು: ಪ್ರತಿಭಾ ದಿನಾಚರಣೆ ಮತ್ತು ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಹಿಂದೂ ಮುಖಂಡನಿಗೆ ಆತಿಥ್ಯಕ್ಕೆ ಅಪಸ್ವರ ಕೇಳಿಬಂದಿದೆ. ವಿವಾದದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ವಿವಿ ಕಾಲೇಜು ಕಾರ್ಯಕ್ರಮವನ್ನು ಮುಂದೂಡಿದ್ದು, ಎಂದಿನಂತೆ ತರಗತಿ ನಡೆಯಲಿವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಮಂಗಳೂರಿನ ಹಂಪನಕಟ್ಟೆ ಬಳಿಯ ವಿವಿ ಕಾಲೇಜುನಲ್ಲಿ ಜೂನ್ 23ರಂದು ಪ್ರತಿಭಾ ದಿನಾಚರಣೆ ಹಾಗೂ ಶನಿವಾರದ ಕಾಲೇಜು ವಾರ್ಷಿಕೋತ್ಸವ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಹಿಂದೂ ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳರಿಗೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ. ಇದಕ್ಕೆ ಎನ್ಎಸ್ ಯುಐ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಕಾಲೇಜಿನಲ್ಲಿ ಕೋಮು ವಿಷಬೀಜ ಭಿತ್ತಲು ಯತ್ನ ಎಂಬ ಆರೋಪ ಕೇಳಿಬಂದಿದೆ. ಯಾವುದೇ ಕಾರಣಕ್ಕೂ ಕಾರ್ಯಕ್ರಮ ನಡೆಯಲು ಬಿಡಲ್ಲ ಅಂತ ಎಬಿವಿಪಿಗೆ ಎಚ್ಚರಿಕೆ ನೀಡಿದೆ. ಸದ್ಯ ಈ ವಿವಾದ ಎನ್ಎಸ್ಯುಐ ಮತ್ತು ಎಬಿವಿಪಿ ವಿದ್ಯಾರ್ಥಿ ಸಂಘಟನೆಗಳ ಗುದ್ದಾಟಕ್ಕೆ ಕಾರಣವಾಗಿದೆ.
ಮಂಗಳೂರು ಕಮಿಷನರ್ ಹಾಗೂ ಕಾಲೇಜು ಪ್ರಾಂಶುಪಾಲರಿಗೂ ಎನ್ಎಸ್ಯುಐ ದೂರು ನೀಡಿದ್ದು, ಶ್ರೀಕಾಂತ್ ಶೆಟ್ಟಿ ಅತಿಥಿಯಾದರೆ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುದಾಗಿ ಎಚ್ಚರಿಕೆ ನೀಡಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…