ಮಂಗಳೂರು : ಮಂಗಳೂರಿನ ಹೊರವಲಯ ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಕೆಲ ವಿದ್ಯಾರ್ಥಿಗಳಲ್ಲಿ ಕೊರೊನಾ ಸೊಂಕು ಕಾಣಿಸಿಕೊಂಡ ಹಿನ್ನಲೆ ಇಲ್ಲಿನ ಸ್ನಾತಕೋತ್ತರ ತರಗತಿಗಳನ್ನು ರದ್ದು ಮಾಡಲಾಗಿದೆ ಎಂದು ವಿಶ್ವವಿದ್ಯಾನಿಲಯ ತಿಳಿಸಿದೆ. ಅಲ್ಲದೆ ವಿಶ್ವವಿದ್ಯಾಲಯ ಕಂಟೋನ್ಮೆಂಟ್ ಝೋನ್ ಮಾಡಲಾಗಿದೆ.
ಈ ಕುರಿತಂತೆ ಮಾಹಿತಿ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು, ವಿದ್ಯಾರ್ಥಿಗಳಲ್ಲಿ ಕೊರೊನಾ ಪ್ರಕರಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ತರಗತಿಗಳನ್ನು ರದ್ದುಗೊಳಿಸಲಾಗಿದೆ. ಮಾರ್ಚ್ 25 ರಿಂದ ಮಾರ್ಚ್ 29 ರವರೆಗೆ ವಿಶ್ವವಿದ್ಯಾಲಯ ಎಲ್ಲಾ ಸ್ನಾತಕೋತ್ತರ ತರಗತಿಗಳನ್ನು ರದ್ದು ಮಾಡಲಾಗಿದೆ.
ಅಲ್ಲದೆ ವಿಶ್ವವಿದ್ಯಾನಿಲಯವನ್ನು ಕಂಟೈನ್ ಮೆಂಟ್ ಝೋನ್ ಆಗಿ ಘೋಷಿಸಲಾಗಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ನಲ್ಲೇ ಇರುವಂತೆ ವ್ಯವಸ್ಥೆ ಮಾಡಲಾಗಿದೆ. ಅವರ ಆರ್ಟಿಪಿಸಿಆರ್ ತಪಾಸಣೆಯನ್ನು ಆರೋಗ್ಯ ಇಲಾಖೆ ನಡೆಸುತ್ತಿದೆ ಎಂದು ಮಾಹಿತಿ ನೀಡಿದರು.
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…