ಮಂಗಳೂರು: ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳನ್ನು ಒಳಗೊಂಡ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಆಂಧ್ರ ಪ್ರದೇಶದ ಅನಂತಪುರದ ನಿವಾಸಿ ಹಾಗೂ ಹಾಲಿ ಅತ್ತಾವರದ ಅಪಾರ್ಟ್ ಮೆಂಟ್ನಲ್ಲಿ ವಾಸವಿರುವ ಡಾ| ರಾಘವ ದತ್ತಾ (28), ಇನ್ನೋರ್ವ ಆರೋಪಿ ಬೆಂಗಳೂರು ಹಲ್ಸೂರು ಜೋಡುಪಾಲ್ಯದ ನಿವಾಸಿ ಹಾಗೂ ಹಾಲಿ ಮಂಗಳೂರಿನ ಫಳ್ನೀರ್ ನಲ್ಲಿ ವಾಸವಿರುವ ಡಾ. ಬಾಲಾಜಿ (29) ಎಂದು ಗುರುತಿಸಲಾಗಿದೆ.
ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿ 13 ಮಂದಿ ಆರೋಪಿಗಳನ್ನು ಈ ಹಿಂದೆಯೇ ಬಂಧಿಸಲಾಗಿದ್ದು, ಮತ್ತೆ ಇಬ್ಬರ ಬಂಧನದೊಂದಿಗೆ ಈ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 15ಕ್ಕೇರಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸುದ್ದಿಗಾರರಿಗೆ ಶುಕ್ರವಾರ ಮಾಹಿತಿ ನೀಡಿದರು.
ಪ್ರಕರಣದ ತನಿಖೆ ಮುಂದವರಿಸಲಾಗಿದ್ದು, ಮತ್ತಷ್ಟು ಜನರ ಬಂಧನದ ಸಾಧ್ಯತೆ ಇದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
Join our Whatsapp group by clicking the below link 👇👇
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…