ಮಂಗಳೂರು: ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳನ್ನು ಒಳಗೊಂಡ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಆಂಧ್ರ ಪ್ರದೇಶದ ಅನಂತಪುರದ ನಿವಾಸಿ ಹಾಗೂ ಹಾಲಿ ಅತ್ತಾವರದ ಅಪಾರ್ಟ್ ಮೆಂಟ್ನಲ್ಲಿ ವಾಸವಿರುವ ಡಾ| ರಾಘವ ದತ್ತಾ (28), ಇನ್ನೋರ್ವ ಆರೋಪಿ ಬೆಂಗಳೂರು ಹಲ್ಸೂರು ಜೋಡುಪಾಲ್ಯದ ನಿವಾಸಿ ಹಾಗೂ ಹಾಲಿ ಮಂಗಳೂರಿನ ಫಳ್ನೀರ್ ನಲ್ಲಿ ವಾಸವಿರುವ ಡಾ. ಬಾಲಾಜಿ (29) ಎಂದು ಗುರುತಿಸಲಾಗಿದೆ.
ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿ 13 ಮಂದಿ ಆರೋಪಿಗಳನ್ನು ಈ ಹಿಂದೆಯೇ ಬಂಧಿಸಲಾಗಿದ್ದು, ಮತ್ತೆ ಇಬ್ಬರ ಬಂಧನದೊಂದಿಗೆ ಈ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 15ಕ್ಕೇರಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸುದ್ದಿಗಾರರಿಗೆ ಶುಕ್ರವಾರ ಮಾಹಿತಿ ನೀಡಿದರು.
ಪ್ರಕರಣದ ತನಿಖೆ ಮುಂದವರಿಸಲಾಗಿದ್ದು, ಮತ್ತಷ್ಟು ಜನರ ಬಂಧನದ ಸಾಧ್ಯತೆ ಇದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
Join our Whatsapp group by clicking the below link 👇👇
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…